Sunday, June 15, 2025
Google search engine
Homeಶಿವಮೊಗ್ಗಸೆ.17 ರಂದು ಬೃಹತ್ ಲಸಿಕಾ ಅಭಿಯಾನ ಲಸಿಕಾಕರಣದ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳ...

ಸೆ.17 ರಂದು ಬೃಹತ್ ಲಸಿಕಾ ಅಭಿಯಾನ ಲಸಿಕಾಕರಣದ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸೂಚನೆ….


ಸೆಪ್ಟೆಂಬರ್ ಮಾಹೆಯಲ್ಲಿ ಗರಿಷ್ಟ ಕೋವಿಡ್ ಲಸಿಕಾಕರಣ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಯವರು ಸೆಪ್ಟೆಂಬರ್ 17 ರಂದು ರಾಜ್ಯಾದ್ಯಂತ ವಿಶೇಷ ಲಸಿಕಾ ಅಭಿಯಾನಕ್ಕೆ ಕರೆ ಕೊಟ್ಟಿದ್ದು, ಜಿಲ್ಲೆಗೆ 80 ಸಾವಿರ ಲಸಿಕೆ ನೀಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ತಲುಪಲು ತಾಲ್ಲೂಕುಗಳ ತಹಶೀಲ್ದಾರರು ಎಲ್ಲ ರೀತಿಯ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಭೆ ನಡೆಸಿದ ಅವರು, ಸೆಪ್ಟೆಂಬರ್ 17 ರ ವಿಶೇಷ ಲಸಿಕಾ ಅಭಿಯಾನದಲ್ಲಿ ನಿಗದಿತ ಗುರಿ ತಲುಪಿ ಯಶಸ್ಸು ಸಾಧಿಸಲು ಅಗತ್ಯ ಸಿದ್ದತೆಯನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ತಿಳಿಸಿದರು.


ತಹಶೀಲ್ದಾರರು ಸ್ಥಳೀಯ ನಗರ ಮತ್ತು ಗ್ರಾಮೀಣ ಸಂಸ್ಥೆಗಳ ಸಹಯೋಗದೊಂದಿಗೆ ಲಸಿಕಾಕರಣಕ್ಕೆ ಅಗತ್ಯವಾದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಡಾಟಾ ಎಂಟ್ರಿ ಆಪರೇಟರ್ ನಿಯೋಜನೆ, ವಾಹನ ವ್ಯವಸ್ಥೆ ಮತ್ತು ಲಸಿಕಾ ಸ್ಥಳ ಗುರುತು ಮಾಡಿ ಸಿದ್ದತೆ ಮಾಡಿಕೊಳ್ಳಬೇಕು. ಅಗತ್ಯ ಸೇವೆಗಳ ಇಲಾಖೆಗಳನ್ನು ಹೊರತುಪಡಿಸಿ ಇತರೆ ಇಲಾಖೆಗಳಿಂದ ಅಗತ್ಯ ಸಿಬ್ಬಂದಿ, ವಾಹನ ವ್ಯವಸ್ಥೆ ಮಾಡಿಕೊಳ್ಳಬೇಕು.


ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಗ್ರಾ.ಪಂ ಮತ್ತು ವಾರ್ಡ್‍ವಾರು ಪಟ್ಟಿಯು ತಾಲ್ಲೂಕು ವೈದ್ಯಾಧಿಕಾರಿಗಳ ಬಳಿ ಇದ್ದು ತಹಶೀಲ್ದಾರರು ಅದನ್ನು ಪಡೆದು ಲಸಿಕಾಕರಣಕ್ಕೆ ಅಗತ್ಯವಾದ ಸಿದ್ದತೆ ಬಗ್ಗೆ ಇಂದೇ ಕ್ರಿಯಾ ಯೋಜನೆ ತಯಾರಿಸಿ ನೀಡಬೇಕು. ಹಾಗೂ ನಾಳೆ ಕ್ಷೇತ್ರ ಭೇಟಿ ನೀಡಿ ಎಲ್ಲ ಸಿದ್ದತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು ಇಂದು ಸಂಜೆ ಪುನಃ ಲಸಿಕಾಕರಣ ಅಭಿಯಾನ ಸಿದ್ದತೆ ಕುರಿತು ಸಭೆ ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಇತರರು ಇದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!