Thursday, May 1, 2025
Google search engine
Homeರಾಜ್ಯಅತಿಕ್ರಮಣಕಾರರಿಗೆ ಬಿಸಿ ಮುಟ್ಟಿಸಿದ ಮಹಾನಗರ ಪಾಲಿಕೆ..!ಇನ್ನೂ ಬಾಕಿ ಇದೆ ಅತಿಕ್ರಮಣದ ತೆರವು ಪತ್ರಿಕೆ ನೀಡಲಿದೆ ಮಾಹಿತಿ..!

ಅತಿಕ್ರಮಣಕಾರರಿಗೆ ಬಿಸಿ ಮುಟ್ಟಿಸಿದ ಮಹಾನಗರ ಪಾಲಿಕೆ..!ಇನ್ನೂ ಬಾಕಿ ಇದೆ ಅತಿಕ್ರಮಣದ ತೆರವು ಪತ್ರಿಕೆ ನೀಡಲಿದೆ ಮಾಹಿತಿ..!

ಶಿವಮೊಗ್ಗ: ನಗರದಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಜಾಗಗಳನ್ನು ಅತಿಕ್ರಮಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುವುದು ಹಾಗೂ ಮನೆಗಳನ್ನು ಕಟ್ಟಿಕೊಳ್ಳುವುದು ಒಂದು ದಂದೆಯಾಗಿ ಶಿವಮೊಗ್ಗದಲ್ಲಿ ಮಾರ್ಪಟ್ಟಿದೆ.

ಇದು ಕೆಲವು ಕಡೆ ಎಕರೆಗಳ ಜಾಗದಲ್ಲಿ ಇದ್ದರೆ ಕೆಲವು ಕಡೆ ಸೈಟುಗಳ ಲೆಕ್ಕದಲ್ಲಿ ನಡೆಯುತ್ತಿದೆ. ಇತ್ತೀಚಿಗೆ ಗೋಪಾಲದ 26ನೇ ವಾರ್ಡಿನಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಜಾಗವನ್ನು ಅತಿಕ್ರಮಣ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಸುದ್ದಿ ಬಿತ್ತರವಾಗಿತ್ತು ಹಾಗೆ ಅಲ್ಲಿಯ ಸ್ಥಳೀಯರು ಕೂಡ ಇದರ ವಿರುದ್ಧ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಿದ್ದರು.

ಮೊನ್ನೆ ಅಂದರೆ ಶುಕ್ರವಾರ ಅತಿಕ್ರಮಿಸಿದ ಒಂದಷ್ಟು ಜಾಗವನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳು ತಮ್ಮ ಸುರ್ಪದಿಗೆ ತೆಗೆದುಕೊಂಡಿದ್ದರು ಇಂದು ಕೂಡ ಗೋಪಾಲದ ಅದೇ ವಾರ್ಡಿನ ಸ್ಥಳಕ್ಕೆ ಸಂಬಂಧಪಟ್ಟಂತೆ ಕೆಲವು ಜಾಗಗಳನ್ನು ವಶಪಡಿಸಿಕೊಂಡು ತಮ್ಮ ಸುರ್ಪದಿಗೆ ತೆಗೆದುಕೊಂಡಿದ್ದಾರೆ.

ಮಹಾನಗರ ಪಾಲಿಕೆಯ ನೂತನ ಆಯುಕ್ತರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಾದ ವಿರೂಪಾಕ್ಷಪ್ಪ ಪೂಜಾರ್ , ರೆವಿನ್ಯೂ ಇನ್ಸ್ಪೆಕ್ಟರ್ ಮಾರುತಿ, ಜೂನಿಯರ್ ಇಂಜಿನಿಯರ್ ಜಗದೀಶ್, ಸರ್ವೆಯರ್ ವೇಣುಗೋಪಾಲ್, ಎ ಆರ್ ಓ ವಿಜಯಲಕ್ಷ್ಮಿ ಪಾಲ್ಗೊಂಡಿದ್ದರು.

ಇನ್ನೂ ಬಾಕಿ ಇದೆ ಅತಿಕ್ರಮಣದ ತೆರವು :

ಇನ್ನು ಕೆಲವು ಕಡೆ ಕೆಲವು ಭೂಗಳ್ಳರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಜಾಗಗಳನ್ನು ಅತಿಕ್ರಮಿಸಿಕೊಂಡಿದ್ದು ಅದನ್ನು ಕೂಡ ಮಹಾನಗರ ಪಾಲಿಕೆಯವರು ತಮ್ಮ ಸುರ್ಪದಿಗೆ ತೆಗೆದುಕೊಳ್ಳಬೇಕಿದೆ ಕೆಲವು ಕಡೆ ಬಫರ್ ಜೊನ್ಗಳನ್ನು ಬಿಡದೆ ಅತಿಕ್ರಮಿಸಿಕೊಂಡಿದ್ದಾರೆ. ಕೆಲವು ಕಡೆ ಪಾರ್ಕ್ ಗಳನ್ನು , ಪುಟ್ ಬಾತ್ ಗಳನ್ನು, ಅತಿಕ್ರಮಿಸಿಕೊಂಡಿದ್ದಾರೆ. ಇವುಗಳ ಬಗ್ಗೆ ಸಂಪೂರ್ಣ ಮಾಹಿತಿ ನೂತನ ಆಯುಕ್ತರಿಗೆ ಪತ್ರಿಕೆ ನೀಡಲಿದೆ ಕೂಡಲೇ ಇವುಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ಸರ್ಕಾರದ ಬಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ಉಳಿಸಬೇಕು ಸಾರ್ವಜನಿಕರ ಆಸ್ತಿಯನ್ನು ಕಾಪಾಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹ ಹಾಗೂ ಮನವಿ.

RELATED ARTICLES
- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!