Wednesday, April 30, 2025
Google search engine
Homeರಾಜ್ಯತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಶಾಸಕರು ಮತ್ತು ತಹಶಿಲ್ದಾರರಿಗೆ ಮನವಿ..!

ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಶಾಸಕರು ಮತ್ತು ತಹಶಿಲ್ದಾರರಿಗೆ ಮನವಿ..!


ತೀರ್ಥಹಳ್ಳಿ:7ನೇ ವೇತನ ಆಯೋಗದ ಶಿಫಾರಸ್ಸುಗಳ ಯಥಾವತ್ ಜಾರಿ. NPS ರದ್ದು ಪಡಿಸಿ OPS ಮರು ಜಾರಿ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವಂತೆ ಸರ್ಕಾರವನ್ನು ಕೋರುವ ನಿಟ್ಟಿನಲ್ಲಿ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

 ಸಂಘದ ಅಧ್ಯಕ್ಷ ಟಿ ವಿ ಸತೀಶ ಮಾತನಾಡಿ, ಸರ್ಕಾರ ನೇಮಿಸಿದ ವೇತನ ಆಯೋಗದ ವರದಿಯನ್ನು ಪಡೆಯಲು ಸರ್ಕಾರವೇ ಎರಡು ಬಾರಿ ಕಾಲಾವಕಾಶವನ್ನು ವಿಸ್ತರಣೆ ಮಾಡಿದ್ದಲ್ಲದೆ. ವರದಿಯನ್ನು ಪಡೆದ ನಂತರವೂ ಅದನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಯಾವುದೇ ಕ್ರಮವಹಿಸುತ್ತಿಲ್ಲ, ವೇತನ ಆಯೋಗ ನೇಮಕ ಮಾಡಿ ಈಗಾಗಲೇ ಹತ್ತೊಂಬತ್ತು ತಿಂಗಳು ಕಳೆದಿದ್ದರೂ ಅದರ ಪ್ರಯೋಜನವಿನ್ನೂ ದೊರಕದೆ ನೌಕರರು  ಹತಾಶರಾಗುತಿದ್ದಾರೆ. 

ಸರ್ಕಾರವೇ ನೀಡಿದ ವಾಗ್ದಾನದಂತೆ ಕೂಡಲೇ ವೇತನ ಆಯೋಗದ ಅನುಷ್ಟಾನ, ಓಪಿಎಸ್ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆ ಕೂಡಲೇ ಜಾರಿಗೊಳಿಸುವಂತೆ ಸಂಘ  ಒತ್ತಾಯಿಸುತ್ತದೆ. 

ಶಾಸಕರು ಸಮಸ್ತ ಸರ್ಕಾರಿ ನೌಕರರ ಧ್ವನಿಯಾಗಿ ಸರ್ಕಾರದ ಮೇಲೆ ಒತ್ತಡ ಹೇರಿ ಸಂಘದ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಸಹಕರಿಸುವಂತೆ ಕೋರಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ನೌಕರರ ಬೇಡಿಕೆ ಸಮಂಜಸವಾಗಿದ್ದು ಈ ಹಿಂದಿನ ಸರ್ಕಾರ ಈ ಬಗ್ಗೆ ಆದೇಶಗಳನ್ನು ಮಾಡಿದ್ದರೂ ಅದು  ಇಂದಿಗೂ ಅನುಷ್ಟಾನಗೊಳ್ಳದಿರುವುದು ವಿಷಾಧನೀಯ. ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ  ಮಾಡುವುದಾಗಿ ಭರವಸೆ ನೀಡಿದರು.

ಸಂಘದ ಕಾರ್ಯದರ್ಶಿ ರಾಮು ಬಿ, ಹಿರಿಯ ಉಪಾಧ್ಯಕ್ಷ ರಾಘವೇಂದ್ರ ಎಸ್, ಉಪಾಧ್ಯಕ್ಷರಾದ ಎಲ್ಲಪ್ಪ ಒಡ್ಡರ್,ಸುಷ್ಮಾ ಎಸ್ ಪಿ, ಸತೀಶ್ ಟಿ ಆರ್,  ಶ್ರೀ ಜೆ ಸಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗಣೇಶ್ ಭಟ್, ಡಾ.ಗುರುರಾಜ್ , ಆಯುಷ್ ವೈದ್ಯಾಧಿಕಾರಿ ಡಾ.ರವಿಶಂಕರ್ ಉಡುಪ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರೂ ಇದ್ದರು.
RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...