ಶಿವಮೊಗ್ಗ:;ಗಾಜನೂರಿನ ತುಂಗಾ ಡ್ಯಾಮ್ ಗೆ ಇಂದು ಜಿಲ್ಲಾಧಿಕಾರಿಗಳಾದ ಡಾ/ ಗುರುದತ್ತ ಹೆಗಡೆ ಭೇಟಿ ನೀಡಿ ಡ್ಯಾಮ್ ನ ಪ್ರಸ್ತುತ ಒಳಹರಿವು ಹಾಗೂ ಹೊರಹರಿವಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಕೈಗೊಳ್ಳಬೇಕಾದ ಎಚ್ಚರಿಕೆಯ ಕುರಿತು ಮಾರ್ಗದರ್ಶನ ನೀಡಿದರು ಹಾಗೂ ಮಳೆಯ ಪ್ರಮಾಣ ಅಧಿಕವಾಗುತ್ತಿರುವ ಕಾರಣ ನದಿ ಪಾತ್ರದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮುಖಾಂತರ ಸ್ಥಳ ಪರಿಶೀಲಿಸಿದರು.