Sunday, June 15, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ :ತುಂಗಾ ನದಿಗೆ ಬಾಗಿನ ಅರ್ಪಿಸಿದ ಆರ್ ಎಂ ಮಂಜುನಾಥ್ ಗೌಡ..!

ತೀರ್ಥಹಳ್ಳಿ :ತುಂಗಾ ನದಿಗೆ ಬಾಗಿನ ಅರ್ಪಿಸಿದ ಆರ್ ಎಂ ಮಂಜುನಾಥ್ ಗೌಡ..!

ತೀರ್ಥಹಳ್ಳಿ: ಪುನರ್ವಸು ಮಳೆಯ ಅಬ್ಬರ ಹೆಚ್ಚಾಗಿದ್ದು ತುಂಗಾ ನದಿ ಮೈದುಂಬಿ ಹರಿಯುತ್ತಿದೆ ಪುರಾಣ ಪ್ರಸಿದ್ಧ ರಾಮಮಂಟಪ. ಮುಳುಗುವ ಹಂತಕ್ಕೆ ತಲುಪಿದ್ದು ಬುಧವಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರು ತುಂಗಾ ನದಿಗೆ ಭಾಗಿನ ಅರ್ಪಿಸಿದರು.

ಬುಧವಾರ ತುಂಗಾ ನದಿಯ ದಡದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಜೊತೆಗೆ ಆಗಮಿಸಿ ಬಾಗಿನ ಅರ್ಪಿಸಿದರು . ಶಾಂತ ರೀತಿಯಲ್ಲಿ ತುಂಗೆಯು ಹರಿಯಲಿ, ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲಿ ಎಂದು ಬೇಡಿಕೆಯನ್ನಿಟ್ಟು ತೀರ್ಥಹಳ್ಳಿಯ ತುಂಗಾ ನದಿಗೆ ಭಕ್ತಿ ಭಾವದಿಂದ ಬಾಗಿನ ಸಮರ್ಪಿಸಿದ್ದೇನೆ ಕಳೆದ ವರ್ಷ ಮಳೆ ಕಡಿಮೆಯಾಗಿ ಮಲೆನಾಡು ಕೂಡ ಬಯಲು ಸೀಮೆ ರೀತಿ ಕಷ್ಟ ಅನುಭವಿಸುವ ಪರಿಸ್ಥಿತಿ ಬಂದಿತ್ತು. ಕುಡಿಯುವ ನೀರಿಗೂ ತೊಂದರೆ ಆಗಿತ್ತು. ರಾಮೇಶ್ವರನ ಅನುಗ್ರಹದಿಂದ ಪುನರ್ವಸು ಮಳೆ ಚೆನ್ನಾಗಿ ಆಗಿದೆ.ಇಲ್ಲಿಯವರೆಗೆ ತೀರ್ಥಹಳ್ಳಿಯಲ್ಲಿ ಎಲ್ಲೂ ಅಪಾಯ ಆಗಿಲ್ಲ. ಜನರಿಗೆ, ಜಾನುವಾರುಗಳಿಗೆ ಯಾರಿಗೂ ಕೂಡ ಅಪಾಯವಾಗದ ರೀತಿಯಲ್ಲಿ ಆಶೀರ್ವಾದ ಮಾಡಲಿ ಎಂದರು.

ಈ ವರ್ಷ ಇನ್ನು ಚೆನ್ನಾಗಿ ಮಳೆಯಾಗಲಿ, ಬೇಸಿಗೆಯಲ್ಲೂ ಸಹ ಕಳೆದ ವರ್ಷದ ಕಹಿ ನೆನಪು ಮರೆಸುವ ರೀತಿಯಲ್ಲಿ ತುಂಗೆಯು ಹರಿಯಲಿ, ರಾಮೇಶ್ವರ ನಮ್ಮೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಯಾವುದೇ ಸಾವು ನೋವು ಆಗದೇ ಶಾಂತಿಯಿಂದ ಮಳೆ ಮುಂದುವರಿಯಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೀತಾ ರಮೇಶ್, ಸುಶೀಲಾ ಶೆಟ್ಟಿ, ಮಂಜುಳಾ ನಾಗೇಂದ್ರ, ರಹಮತುಲ್ಲಾ ಅಸಾದಿ, ಬಿ. ಗಣಪತಿ, ರಾಘವೇಂದ್ರ ಶೆಟ್ಟಿ,ಡಾ. ಸುಂದರೇಶ್, ಕೆಸ್ತೂರು ಮಂಜುನಾಥ್, ವೈ ನಾಗೇಂದ್ರ, ಕುರುವಳ್ಳಿ ನಾಗರಾಜ್ ಅರ್ಜುನ ಗೌಡ ನಾಗೇಶ್ ಮೇಳಿಗೆ ಸಂದೀ್ ಗಾಡ್ರುಗದ್ದೆ ಸುಮಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!