Wednesday, April 30, 2025
Google search engine
Homeಶಿವಮೊಗ್ಗಭ್ರಷ್ಟ ಗ್ರಾಮ ಪಂಚಾಯತ್ ಅಧ್ಯಕ್ಷ‌ನ‌ ಮನೆ ಮೇಲೆ ಲೋಕಾಯುಕ್ತ ದಾಳಿ..!

ಭ್ರಷ್ಟ ಗ್ರಾಮ ಪಂಚಾಯತ್ ಅಧ್ಯಕ್ಷ‌ನ‌ ಮನೆ ಮೇಲೆ ಲೋಕಾಯುಕ್ತ ದಾಳಿ..!

ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗೇಶ್.ಬಿ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಇವರಿಗೆ ಸಂಬಂಧಿಸಿದ 5 ಸ್ಥಳಗಳಲ್ಲಿ ದಿ:19/07/2024 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ನಾಗೇಶ್ ಬಿ. ರವರಿಗೆ ಸಂಬಂದಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು , ಅಂದಾಜು ರೂ 12,80,000/- ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 1,76,000/- ಮೌಲ್ಯದ ವಾಹನಗಳು, ಅಂದಾಜು 7,00,000/- ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 5,71,640/- ಗಳು ನಗದು ಹಣ ಪತ್ತೆಯಾಗಿದ್ದು ಅಂದಾಜು ರೂ 1,33,87,826/- ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆಯಲ್ಲಿ ಪತ್ತೆಯಾದ ನಗದು ರೂ 5,00,000/- ಗಳನ್ನು ತನಿಖೆ ಸಂಬಂದ ಅಮಾನತ್ತುಪಡಿಸಿಕೊಳ್ಳಲಾಗಿರುತ್ತದೆ.

ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ವೀರಬಸಪ್ಪ ಎಲ್ ಕುಸಲಾಪುರ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿರುತ್ತಾರೆ.

ಈ ದಾಳಿ ಸಮಯಕ್ಕೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...