Wednesday, April 30, 2025
Google search engine
Homeಶಿವಮೊಗ್ಗಮಲೆನಾಡಿನಲ್ಲಿ ಮಳೆಯ ಜೂತೆ ಗಾಳಿ ಅರ್ಭಟ ಜೋರು..!

ಮಲೆನಾಡಿನಲ್ಲಿ ಮಳೆಯ ಜೂತೆ ಗಾಳಿ ಅರ್ಭಟ ಜೋರು..!

ಸುದ್ದಿ: ರಶ್ಮಿ ಶ್ರೀಕಾಂತ್ ನಾಯಕ್..

ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಮಳೆಯ ಕಣ್ಣಾಮುಚ್ಚಾಲೆ ಆಟ ಮುಂದೂವರೆದಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡ ಕವಿದ ಹಾಗೂ ಶೀತ ವಾತಾವರಣ ನಿರ್ಮಾಣವಾಗಿದೆ. ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿವೆ, ತಾಲೂಕಿನಲ್ಲಿ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ.

ಮಲೆನಾಡಿನ ಆಗುಂಬೆ ಬಿದರಗೋಡು,ಕೆಂದಾಳ್ ಬೈಲು, ಮೇಗರವಳ್ಳಿ,.ಕಮ್ಮರಡಿ, ಕಲ್ಮನೆ,
ಸುತ್ತಮುತ್ತ ಮಳೆಯ ಅಬ್ಬರ ಸ್ವಲ್ಪಮಟ್ಟಿಗೆ ಕಡಿಮೆಯಾಗಿ. ಬಿಟ್ಟು ಬಿಟ್ಟು.ಮಳೆಯಾಗುತ್ತಿದ್ದು, ಈ ಭಾಗದಲ್ಲಿ ಗಾಳಿಯ ಅಬ್ಬರ ಜೋರಾಗಿದೆ. ಗಾಳಿಯ ಅಬ್ಬರಕ್ಕೆ ವಿದ್ಯುತ್‌ ಕಂಬಗಳು ಧರೆಗುಳಿದ್ದು ಗ್ರಾಮೀಣ ಪ್ರದೇಶದಲ್ಲಿ
ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮರಗಳು
ವಿದ್ಯುತ್ ತಂತಿ ಮೇಲೆ ಬಿದ್ದು ಕೆಲವು ಕಡೆ ಮರಗಳು
ರಸ್ತೆಗುರುಳಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು.
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು
ಮಾಡಿಕೊಡುತ್ತಿದ್ದಾರೆ.

ವಿದ್ಯುತ್ ಕಂಬಗಳ ಮೇಲೆ ತೆಂಗಿನ ತೆಂಗಿನ ಮರ ಬಿದ್ದು ಇನ್ನೂ ಕೆಲವು ಕಡೆಗಳಲ್ಲಿ
ವಿದ್ಯುತ್‌ ಸಂಪರ್ಕ ವ್ಯತ್ಯಯವಾಗಿದೆ. ವಿದ್ಯುತ್
ಕಂಬಗಳು ಹಾನಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ. ಮಳೆ ನಿಂತರು ಮಳೆ ಹನಿ
ನಿಂತಿಲ್ಲ ಎನ್ನುವಂತೆ ಮಳೆ ಹಾಗೂ ಗಾಳಿಯಿಂದ
ಅನೇಕ ಮನೆಗಳಿಗೆ ಸಣ್ಣ ಪುಟ್ಟ ಹಾನಿಯಾಗಿದೆ. ತುಂಗಾ ನದಿಗಳಲ್ಲಿನ ನೀರಿನ ಮಟ್ಟ
ಸ್ವಲ್ಪಮಟ್ಟಿಗೆ ಎರಿಕೆಯಾಗಿದೆ. ಪ್ರವಾಹಕ್ಕೆ ಒಳಗಾಗಿದ್ದ ಜಮೀನುಗಳಲ್ಲಿನ ನೀರಿನ ಪ್ರಮಾಣ ಹಾಗೆ ಇದ್ದು ಹಳ್ಳ – ಕೊಳ್ಳಗಳಲ್ಲಿನ ನೀರಿನ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು, ಯಥಾಸ್ಥಿತಿಗೆ ಬರುತ್ತಿದೆ

ಭಾರಿ ಗಾಳಿ ಮಳೆ – ತೀರ್ಥಹಳ್ಳಿಯಲ್ಲಿ ಮರ ಬಿದ್ದು ಕಾರು ಜಖಂ

ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಮಾರುತಿ ಸ್ವಿಫ್ಟ್ ಕಾರು ಜಖಂ ಗೊಂಡ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ .

ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಕಛೇರಿಯ ಪಕ್ಕದಲ್ಲಿ ಇದ್ದಂತಹ ಭಾರಿ ಗಾತ್ರದ ಹಳೆಯ ಗೋಳಿ ಮರವೊಂದು ಬುಡಸಮೇತ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಶಿಫ್ಟ್ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ತಡರಾತ್ರಿ ಈ ಘಟನೆ ನಡೆದ ಕಾರಣ ಬೇರೆ ಯಾವುದೇ ರೀತಿ ಅವಘಡ ಸಂಭವಿಸಿಲ್ಲ.ಘಟನಾ ಸ್ಥಳಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಸೇರಿದಂತೆ ಅನೇಕ ಅದಿಕಾರಿಗಳು ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...