Saturday, June 14, 2025
Google search engine
Homeಶಿವಮೊಗ್ಗಮಲೆನಾಡಿನಲ್ಲಿ ಮಳೆಯ ಜೂತೆ ಗಾಳಿ ಅರ್ಭಟ ಜೋರು..!

ಮಲೆನಾಡಿನಲ್ಲಿ ಮಳೆಯ ಜೂತೆ ಗಾಳಿ ಅರ್ಭಟ ಜೋರು..!

ಸುದ್ದಿ: ರಶ್ಮಿ ಶ್ರೀಕಾಂತ್ ನಾಯಕ್..

ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಮಳೆಯ ಕಣ್ಣಾಮುಚ್ಚಾಲೆ ಆಟ ಮುಂದೂವರೆದಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡ ಕವಿದ ಹಾಗೂ ಶೀತ ವಾತಾವರಣ ನಿರ್ಮಾಣವಾಗಿದೆ. ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿವೆ, ತಾಲೂಕಿನಲ್ಲಿ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ.

ಮಲೆನಾಡಿನ ಆಗುಂಬೆ ಬಿದರಗೋಡು,ಕೆಂದಾಳ್ ಬೈಲು, ಮೇಗರವಳ್ಳಿ,.ಕಮ್ಮರಡಿ, ಕಲ್ಮನೆ,
ಸುತ್ತಮುತ್ತ ಮಳೆಯ ಅಬ್ಬರ ಸ್ವಲ್ಪಮಟ್ಟಿಗೆ ಕಡಿಮೆಯಾಗಿ. ಬಿಟ್ಟು ಬಿಟ್ಟು.ಮಳೆಯಾಗುತ್ತಿದ್ದು, ಈ ಭಾಗದಲ್ಲಿ ಗಾಳಿಯ ಅಬ್ಬರ ಜೋರಾಗಿದೆ. ಗಾಳಿಯ ಅಬ್ಬರಕ್ಕೆ ವಿದ್ಯುತ್‌ ಕಂಬಗಳು ಧರೆಗುಳಿದ್ದು ಗ್ರಾಮೀಣ ಪ್ರದೇಶದಲ್ಲಿ
ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮರಗಳು
ವಿದ್ಯುತ್ ತಂತಿ ಮೇಲೆ ಬಿದ್ದು ಕೆಲವು ಕಡೆ ಮರಗಳು
ರಸ್ತೆಗುರುಳಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು.
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು
ಮಾಡಿಕೊಡುತ್ತಿದ್ದಾರೆ.

ವಿದ್ಯುತ್ ಕಂಬಗಳ ಮೇಲೆ ತೆಂಗಿನ ತೆಂಗಿನ ಮರ ಬಿದ್ದು ಇನ್ನೂ ಕೆಲವು ಕಡೆಗಳಲ್ಲಿ
ವಿದ್ಯುತ್‌ ಸಂಪರ್ಕ ವ್ಯತ್ಯಯವಾಗಿದೆ. ವಿದ್ಯುತ್
ಕಂಬಗಳು ಹಾನಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ. ಮಳೆ ನಿಂತರು ಮಳೆ ಹನಿ
ನಿಂತಿಲ್ಲ ಎನ್ನುವಂತೆ ಮಳೆ ಹಾಗೂ ಗಾಳಿಯಿಂದ
ಅನೇಕ ಮನೆಗಳಿಗೆ ಸಣ್ಣ ಪುಟ್ಟ ಹಾನಿಯಾಗಿದೆ. ತುಂಗಾ ನದಿಗಳಲ್ಲಿನ ನೀರಿನ ಮಟ್ಟ
ಸ್ವಲ್ಪಮಟ್ಟಿಗೆ ಎರಿಕೆಯಾಗಿದೆ. ಪ್ರವಾಹಕ್ಕೆ ಒಳಗಾಗಿದ್ದ ಜಮೀನುಗಳಲ್ಲಿನ ನೀರಿನ ಪ್ರಮಾಣ ಹಾಗೆ ಇದ್ದು ಹಳ್ಳ – ಕೊಳ್ಳಗಳಲ್ಲಿನ ನೀರಿನ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು, ಯಥಾಸ್ಥಿತಿಗೆ ಬರುತ್ತಿದೆ

ಭಾರಿ ಗಾಳಿ ಮಳೆ – ತೀರ್ಥಹಳ್ಳಿಯಲ್ಲಿ ಮರ ಬಿದ್ದು ಕಾರು ಜಖಂ

ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಮಾರುತಿ ಸ್ವಿಫ್ಟ್ ಕಾರು ಜಖಂ ಗೊಂಡ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ .

ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಕಛೇರಿಯ ಪಕ್ಕದಲ್ಲಿ ಇದ್ದಂತಹ ಭಾರಿ ಗಾತ್ರದ ಹಳೆಯ ಗೋಳಿ ಮರವೊಂದು ಬುಡಸಮೇತ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಶಿಫ್ಟ್ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ತಡರಾತ್ರಿ ಈ ಘಟನೆ ನಡೆದ ಕಾರಣ ಬೇರೆ ಯಾವುದೇ ರೀತಿ ಅವಘಡ ಸಂಭವಿಸಿಲ್ಲ.ಘಟನಾ ಸ್ಥಳಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಸೇರಿದಂತೆ ಅನೇಕ ಅದಿಕಾರಿಗಳು ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!