
ಮಾಲು ಸಹಿತ ಅಡಿಕೆ ಕಳ್ಳರ ಬಂಧನ !
ತೀರ್ಥಹಳ್ಳಿ : ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದವರ ಪ್ರಕರಣವನ್ನು ಬೆನ್ನು ಹತ್ತಿದ ಪೊಲೀಸರ ತಂಡ ಕಳ್ಳರನ್ನು ಭಂದಿಸುವಲ್ಲಿ ಯಶಸ್ವಿಯಾಗಿದ್ದು ಕಳ್ಳರಿಂದ ಅಂದಾಜು 80 ಸಾವಿರ ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ 3 ಲಕ್ಷ ರೂ ವೆಚ್ಚದ ಬೊಲೆರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಾದ ಶಿಕಾರಿಪುರ ಮೂಲದ
ಹನುಮಂತ, ಅಭಿಷೇಕ್ ಹಾಗೂ ತುಕಾರಾಜ್ ಎಂಬುವರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯೂ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಮಾಳೂರು ಸಿಪಿಐ
ಶ್ರೀಧರ್ ರವರ ಮಾರ್ಗದರ್ಶನದಲ್ಲಿ ನಡೆದಿದೆ.
ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!
ತೀರ್ಥಹಳ್ಳಿ : ಮಾಳೂರು ವ್ಯಾಪ್ತಿಯ ಆಂಜನೇಯ ದೇವಸ್ಥಾನ ಗಾಳಿಮಾರಮ್ಮ ದೇವಸ್ಥಾನ ಹಾಗೂ ಬಾಳಗಾರು ಸಮೀಪದ ರಾಮೇಶ್ವರ ದೇವಸ್ಥಾನಗಳಲ್ಲಿ ಘಂಟೆ, ಪೂಜಾಸಾಮಾಗ್ರಿಗಳು ಹಾಗೂ ಬೆಳ್ಳಿಯ ದೀಪಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.ಮಾಳೂರು ಹಾಗೂ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೂಜಾ ಸಾಮಾಗ್ರಿ ಕಳ್ಳತನದ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಬೆನ್ನುಹತ್ತಿದ ಪೊಲೀಸರ ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ ಅಂದಾಜು ಮೌಲ್ಯ 70 ಸಾವಿರ ರೂಪಾಯಿಗಳ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ಎರಡು ಲಕ್ಷ ಮೌಲ್ಯದ ಓಮ್ನಿ ಕಾರನ್ನು ವಶ ಪಡಿಸಿಕೊಂಡಿರುತ್ತಾರೆ. ಆರೋಪಿಗಳಾದ ಭದ್ರಾವತಿ ಮೂಲದ 26 ವರ್ಷದ ಅರುಣ ಹಾಗೂ 24 ವರ್ಷದ ಆಕಾಶ್ ಎಂಬ ಇವರನ್ನ ಬಂಧಿಸಲಾಗಿದೆ. ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಸಿಪಿಐ ಶ್ರೀಧರ್ ರವರ ಮಾರ್ಗದರ್ಶನದಲ್ಲಿ ಬಂಧಿಸಲಾಗಿದೆ.