Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ ಪೊಲೀಸರಿಂದ ಅಡಿಕೆ ಕಳ್ಳರು ಹಾಗೂ ದೇವಸ್ಥಾನದ ಪೂಜಾ ಸಾಮಗ್ರಿಗಳನ್ನು ಕದ್ದ ಕಳ್ಳರ ಬಂಧನ..!

ತೀರ್ಥಹಳ್ಳಿ ಪೊಲೀಸರಿಂದ ಅಡಿಕೆ ಕಳ್ಳರು ಹಾಗೂ ದೇವಸ್ಥಾನದ ಪೂಜಾ ಸಾಮಗ್ರಿಗಳನ್ನು ಕದ್ದ ಕಳ್ಳರ ಬಂಧನ..!

ಮಾಲು ಸಹಿತ ಅಡಿಕೆ ಕಳ್ಳರ ಬಂಧನ !

ತೀರ್ಥಹಳ್ಳಿ : ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದವರ ಪ್ರಕರಣವನ್ನು ಬೆನ್ನು ಹತ್ತಿದ ಪೊಲೀಸರ ತಂಡ ಕಳ್ಳರನ್ನು ಭಂದಿಸುವಲ್ಲಿ ಯಶಸ್ವಿಯಾಗಿದ್ದು ಕಳ್ಳರಿಂದ ಅಂದಾಜು 80 ಸಾವಿರ ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ 3 ಲಕ್ಷ ರೂ ವೆಚ್ಚದ ಬೊಲೆರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಶಿಕಾರಿಪುರ ಮೂಲದ
ಹನುಮಂತ, ಅಭಿಷೇಕ್ ಹಾಗೂ ತುಕಾರಾಜ್ ಎಂಬುವರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯೂ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಮಾಳೂರು ಸಿಪಿಐ
ಶ್ರೀಧರ್ ರವರ ಮಾರ್ಗದರ್ಶನದಲ್ಲಿ ನಡೆದಿದೆ.

ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

ತೀರ್ಥಹಳ್ಳಿ : ಮಾಳೂರು ವ್ಯಾಪ್ತಿಯ ಆಂಜನೇಯ ದೇವಸ್ಥಾನ ಗಾಳಿಮಾರಮ್ಮ ದೇವಸ್ಥಾನ ಹಾಗೂ ಬಾಳಗಾರು ಸಮೀಪದ ರಾಮೇಶ್ವರ ದೇವಸ್ಥಾನಗಳಲ್ಲಿ ಘಂಟೆ, ಪೂಜಾಸಾಮಾಗ್ರಿಗಳು ಹಾಗೂ ಬೆಳ್ಳಿಯ ದೀಪಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.ಮಾಳೂರು ಹಾಗೂ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೂಜಾ ಸಾಮಾಗ್ರಿ ಕಳ್ಳತನದ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಬೆನ್ನುಹತ್ತಿದ ಪೊಲೀಸರ ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ ಅಂದಾಜು ಮೌಲ್ಯ 70 ಸಾವಿರ ರೂಪಾಯಿಗಳ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ಎರಡು ಲಕ್ಷ ಮೌಲ್ಯದ ಓಮ್ನಿ ಕಾರನ್ನು ವಶ ಪಡಿಸಿಕೊಂಡಿರುತ್ತಾರೆ. ಆರೋಪಿಗಳಾದ ಭದ್ರಾವತಿ ಮೂಲದ 26 ವರ್ಷದ ಅರುಣ ಹಾಗೂ 24 ವರ್ಷದ ಆಕಾಶ್ ಎಂಬ ಇವರನ್ನ ಬಂಧಿಸಲಾಗಿದೆ.‌ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಸಿಪಿಐ ಶ್ರೀಧರ್ ರವರ ಮಾರ್ಗದರ್ಶನದಲ್ಲಿ ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...