Saturday, June 14, 2025
Google search engine
Homeಶಿವಮೊಗ್ಗಶಿವಮೊಗ್ಗ ಲೋಕಾಯುಕ್ತರಿಂದ ಸಾಗರ ಎಆರ್‌ಟಿಓ ಕಚೇರಿಗೆ ದಿಡೀರ್ ಬೇಟಿ..! ದಾಖಲೆಗಳ ಪರಿಶೀಲನೆ ಖಡಕ್ ಸೂಚನೆ ..!

ಶಿವಮೊಗ್ಗ ಲೋಕಾಯುಕ್ತರಿಂದ ಸಾಗರ ಎಆರ್‌ಟಿಓ ಕಚೇರಿಗೆ ದಿಡೀರ್ ಬೇಟಿ..! ದಾಖಲೆಗಳ ಪರಿಶೀಲನೆ ಖಡಕ್ ಸೂಚನೆ ..!

ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು ದಾಖಲೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂದ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!