Wednesday, April 30, 2025
Google search engine
Homeಶಿವಮೊಗ್ಗShivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ...

Shivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ ಅಧ್ಯಕ್ಷ ಟಿ ಡಿ ಮೇಘರಾಜ್..!

ಶಿವಮೊಗ್ಗ: ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿ ವಿರುದ್ಧ ಮಹಿಳಾ ಒಬ್ಬರು ನಗರದ ಮಹಿಳಾ ಠಾಣೆಯಲ್ಲಿ ತನಗೆ ಮೋಸ ಮಾಡಿ ಸುಳ್ಳು ಹೇಳಿ ವಂಚಿಸಿ ತನ್ನನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದು ಕೊಲೆ ಮಾಡುವುದಾಗಿ ಬೆದರಿಸಿ ಮದುವೆಯಾಗುವುದಾಗಿ ನಂಬಿಸಿ ತನ್ನ ಹತ್ತಿರ ಹಣ ತೆಗೆದುಕೊಂಡು ತನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ದೂರು ನೀಡಿದ್ದರು.

ದೂರು ನೀಡಿದ ಬೆನ್ನಲ್ಲೇ ಶರತ್ ಕಲ್ಯಾಣಿ ಪರಾರಿಯಾಗಿದ್ದು ಆತನ ಹುಡುಕಾಟದಲ್ಲಿ ಶಿವಮೊಗ್ಗ ಪೊಲೀಸರು ಇದ್ದಾರೆ .

ಈ ಬೆಳವಣಿಗೆಗಳ ಮಧ್ಯೆ ಶಿಸ್ತಿನ ಪಕ್ಷ ಬಿಜೆಪಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶರತ್ ಕಲ್ಯಾಣಿಯನ್ನು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಸ್ಥಾನದಿಂದ ತೆಗೆದುಹಾಕಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿಡಿ ಮೇಘರಾಜ್ಅವರು ಪತ್ರಿಕೆ ಜೊತೆ ಮಾತನಾಡುತ್ತಾ ಶರತ್ ಕಲ್ಯಾಣಿ ಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಯಾವುದೇ ರೀತಿಯ ನೆರವನ್ನು ಪಕ್ಷ ನೀಡುವುದಿಲ್ಲ ಕಾನೂನಿನ ಚೌಕಟ್ಟಿನಲ್ಲಿ ಆತನ ಮೇಲೆ ದೂರು ದಾಖಲಾಗಿದ್ದು ಆತನನ್ನು ಆ ಸ್ಥಾನದಿಂದ ತೆಗೆದು ಹಾಕಲಾಗಿದೆ.

ಆತನಿಗೂ ಪಕ್ಷಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಮಹಿಳೆಯರ ಬಗ್ಗೆ ಬಿಜೆಪಿ ಪಕ್ಷಕ್ಕೆ ವಿಶೇಷವಾದ ಗೌರವವಿದೆ ಆಸ್ಥಾನದಲ್ಲಿದ್ದ ಶರತ್ ಕಲ್ಯಾಣಿ ಸರಿಯಾಗಿ ನಡೆದುಕೊಳ್ಳಬೇಕಿತ್ತು ಒಂದು ವೇಳೆ ಆತ ತಪ್ಪಿಸಸ್ಥ ಎಂದು ಸಾಬೀತಾದರೆ ಪಕ್ಷ ಎಂದಿಗೂ ಆತನನ್ನು ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಾಗೆ ಮುಂದುವರೆದು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...