ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಬಳಿ ಮಧ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.
ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.ಎಸ್ ಐ ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಇನ್ನೂ ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.