Home ಶಿವಮೊಗ್ಗಗುಂಡಿ ಬಿದ್ದ ರಸ್ತೆಯನ್ನು ಮುಚ್ಚಿಸಿ,ರಸ್ತೆಯಲ್ಲಿ ಕಡಿದು ಹಾಕಿರುವ ಮರದ ತುಂಡುಗಳನ್ನು ತೆರವುಗೊಳಿಸಿ ಪುಣ್ಯ ಕಟ್ಟಿಕೊಳ್ಳಿ ವಾಹನ ಸವಾರರ ಮನವಿ..!

ಗುಂಡಿ ಬಿದ್ದ ರಸ್ತೆಯನ್ನು ಮುಚ್ಚಿಸಿ,ರಸ್ತೆಯಲ್ಲಿ ಕಡಿದು ಹಾಕಿರುವ ಮರದ ತುಂಡುಗಳನ್ನು ತೆರವುಗೊಳಿಸಿ ಪುಣ್ಯ ಕಟ್ಟಿಕೊಳ್ಳಿ ವಾಹನ ಸವಾರರ ಮನವಿ..!

by EDITOR NEWS WARRIORS
0 comments

ಶಿವಮೊಗ್ಗ: ತೀರ್ಥಹಳ್ಳಿಗೆ ಹೋಗುವ ಮಾರ್ಗದಲ್ಲಿರುವಂತಹ ನ್ಯೂ ಮಂಡಲಿ ಸರ್ಕಲ್ ನಲ್ಲಿ ಚೆನ್ನಾಗಿದ್ದ ಹೈವೇ ರೋಡನ್ನು 7 8 ದಿವಸ ಗಳ ಹಿಂದೆ ಅಗೆದು ಕೆ ಇ ಬಿ ಯಾ ಒಂದು ಕಾಮಗಾರಿಯನ್ನು ಮಾಡಿ ಮುಗಿಸಿದ್ದಾರೆ.

ಕೆಲಸ ಮುಗಿದ ನಂತರ ಆ ರಸ್ತೆಯನ್ನು ಸರಿಯಾಗಿ ಮುಚ್ಚದೆ ಗುಂಡಿಗಳನ್ನು ಮಾಡಿ ಹೋಗಿರುತ್ತಾರೆ ಕಾರ್ಯನಿರ್ವಹಿಸುತ್ತಿದ್ದಂತಹ ಅಧಿಕಾರಿಗಳನ್ನು ಸತತವಾಗಿ ಮೂರು ನಾಲ್ಕು ದಿನಗಳಿಂದ ಸ್ಥಳೀಯರು ಸಂಪರ್ಕಿಸಿದರು ಏನು ಪ್ರಯೋಜನವಾಗಿಲ್ಲ.

ಮೊದಲನೆಯ ದಿನ ಸಂಪರ್ಕಿಸಿದ್ದಾಗ ನಾಳೆ ಗುಂಡಿಗಳನ್ನು ಮುಚ್ಚಿ ಕೊಡುತ್ತೇನೆ ಎಂದಿದ್ದರು ಆದರೆ ಈ ದಿನ ಕರೆ ಮಾಡಿದ್ದಾಗ ಹೇಳುತ್ತಾರೆ ಅವರಿಗೆ ಹೇಳಿದ್ದೇವೆ ಇವರಿಗೆ ಹೇಳಿದ್ದೇವೆ ಅಂತ ಅಲ್ಲಿ ಓಡಾಡಲಿಕ್ಕೆ ತುಂಬಾನೇ ತೊಂದರೆಯಾಗುತ್ತಿದೆ ಶಾಲಾ ವಾಹನಗಳು ಹಾಗೂ ವೃದ್ಧರು ಹೆಣ್ಣು ಮಕ್ಕಳು ದೊಡ್ಡ ದೊಡ್ಡ ವಾಹನಗಳಲ್ಲಿ ಸಂಚರಿಸುವಾಗ ಅಲ್ಲಿ ತುಂಬಾ ಧೂಳು ಬರುತ್ತಿದೆ ಅನಾರೋಗ್ಯಕ್ಕೆ ತುತ್ತಾಗುವ ಸ್ಥಿತಿ ಉಂಟಾಗುತ್ತಿದೆ ತುಂಬಾ ತೊಂದರೆಯಾಗುತ್ತಿದೆ.

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ, ನೌಕರರು ಕೆಲಸಕ್ಕೆ ತೆರಳುವಾಗ ಅಪಘಾತಗಳು ಸಂಭವಿಸುತ್ತಿದ್ದು ದೊಡ್ಡ ಅಪಘಾತ ಆಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಬೇಗ ಗುಂಡಿಗಳನ್ನು ಮುಚ್ಚಿಸಿಲಿ ಎನ್ನುವುದು ಸ್ಥಳೀಯರ ಹಾಗೂ ಅಲ್ಲಿ ಓಡಾಡುವ ವಾಹನ ಸವಾರರ ಮನವಿ.

ಕೋಣಂದೂರಿನಲ್ಲೂ ಸಹ ಸರ್ಕಾರಿ ಆಸ್ಪತ್ರೆಯ ಎದುರುಗಡೆ ಮರದ ತುಂಡುಗಳನ್ನು ಕಡಿದು ಹಾಗೆ ಬಿಟ್ಟಿದ್ದು ವಾಹನಸವಾರರ ಓಡಾಟಕ್ಕೆ ಅಡಚಣೆ ಉಂಟಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿ ಮಾಡಿ ಮರದ ತುಂಡುಗಳನ್ನು ತೆರವುಗೊಳಿಸಿ ಓಡಾಟಕ್ಕೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎನ್ನುವುದು ಸ್ಥಳೀಯರ ಮನವಿ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...