Home ಶಿವಮೊಗ್ಗಆರೋಗ್ಯshivamogga:ಆರೋಗ್ಯ ನಿರೀಕ್ಷಣಾಧಿಕಾರಿ ದಿಲೀಪ್ ರೆಡ್ಡಿ ಇನ್ನಿಲ್ಲ..!

shivamogga:ಆರೋಗ್ಯ ನಿರೀಕ್ಷಣಾಧಿಕಾರಿ ದಿಲೀಪ್ ರೆಡ್ಡಿ ಇನ್ನಿಲ್ಲ..!

by EDITOR NEWS WARRIORS
0 comments

ಶಿವಮೊಗ್ಗ: ಜನಸ್ನೇಹಿ, ಉತ್ತಮ ಕೆಲಸಗಾರ, ತನ್ನ ಜೊತೆಗೆ ಕೆಲಸ ಮಾಡುವರ ಜೊತೆ, ಮೇಲಾಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದ ಸದಾ ಬೇರೆಯವರ ಸಮಸ್ಯೆಗೆ ಸ್ಪಂದಿಸುತ್ತಿದ್ದ ನಗರದ ವಿದ್ಯಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದಿಲೀಪ್ ರೆಡ್ಡಿ ಮಣಿಪಾಲ್ ನಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಳೆದ ಹಲವಾರು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಿಲೀಪ್ ರೆಡ್ಡಿ ಮಣಿಪಾಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು ಕೂಡ ತಲೆಯಲ್ಲಿ ರಕ್ತ ಗಟ್ಟಿಯಾಗದ ಕಾರಣ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ಅಕಾಲಿಕ ಅಗಲಿಕೆಗೆ ಸಹೋದ್ಯೋಗಿಗಳು, ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳು ಬಂದು ಮಿತ್ರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತ ದಿಲೀಪ್ ರೆಡ್ಡಿ ತಾಯಿ, ಪತ್ನಿ ಜೊತೆಗೆ ಒಂದುವರೆ ವರ್ಷದ ಮಗುವನ್ನು ಬಿಟ್ಟು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಇಂದು ರಾತ್ರಿ 12 ಗಂಟೆಗೆ ಶಿವಮೊಗ್ಗ ನಗರದ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ತಂದು ನಂತರ ಇವರ ಹುಟ್ಟೂರಾದ ಚನ್ನಗಿರಿ ತಾಲೂಕು ಮರಡಿ ಗ್ರಾಮದಲ್ಲಿ ಸೆ. 12 ರ ಗುರುವಾರ ಮಧ್ಯಾಹ್ನ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಅವರ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ.

ದಿಲೀಪ್ ರೆಡ್ಡಿ ಅವರ ಅಕಾಲಿಕ ನಿಧನಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು,ಸಹ ಸಿಬ್ಬಂದಿಗಳು, ಬಂಧು ಮಿತ್ರರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...