Tuesday, April 29, 2025
Google search engine
Homeತೀರ್ಥಹಳ್ಳಿಗಾಂಧೀಜಿ- ಶಾಸ್ತ್ರೀಜಿ ಜಯಂತಿಯನ್ನು ವಿಶಿಷ್ಟವಾಗಿ ಸಂಭ್ರಮಿಸಿದ ತೀರ್ಥಹಳ್ಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ...

ಗಾಂಧೀಜಿ- ಶಾಸ್ತ್ರೀಜಿ ಜಯಂತಿಯನ್ನು ವಿಶಿಷ್ಟವಾಗಿ ಸಂಭ್ರಮಿಸಿದ ತೀರ್ಥಹಳ್ಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘ..!

ದೇಶ ಕಂಡ ಮಹಾನ್ ಚೇತನಗಳಾದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ತೀರ್ಥಹಳ್ಳಿತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಚ್ಚತಾ ಕಾರ್ಯವನ್ನು ನಡೆಸುವ ಮೂಲಕ ವಿಶಿಷ್ಟವಾಗಿ ಸಂಭ್ರಮಿಸಿತು.

ಶ್ರಮದಾನದ ಮೂಲಕ ಪಟ್ಟಣದ ಕುವೆಂಪು ರಸ್ತೆಯಲ್ಲಿನ ಸರ್ಕಾರಿ ನೌಕರರ ಭವನದ ಸುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಿದ ಸಂಘಟನೆ ರಸ್ತೆಯ ಇಕ್ಕೆಲಗಳಲ್ಲೂ ಸಂಗ್ರಹವಾಗಿದ್ದ ದೊಡ್ಡ ಸಂಖ್ಯೆಯ ತ್ಯಾಜ್ಯಗಳನ್ನು ಸಂಗ್ರಹಿಸಿ, ವಿಲೇವಾರಿ ಮಾಡುವುದರ ಜೊತೆಗೆ “ನಮ್ಮ ಪರಿಸರದ ಸ್ವಚ್ಚತೆ ನಮ್ಮ ಜವಬ್ದಾರಿ” ಎಂಬ ಸಂದೇಶದ ಮೂಲಕ ಸ್ವಚ್ಚತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ ನಡೆಸಿತು.

ಇದೇ ಸಂದರ್ಭದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2024 ರ ಅಂಗವಾಗಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟದ 70 ವರ್ಷ ಮೇಲ್ಪಟ್ಟವರ 100 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕಾಡಪ್ಪ ಗೌಡರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ ಟಿ ವಿ, ಕಾರ್ಯದರ್ಶಿ ರಾಮು ಬಿ, ಖಜಾಂಚಿ ಪವಿತ್ರ ಹೆಚ್ ಸಿ, ಹಿರಿಯ ಉಪಾಧ್ಯಕ್ಷ ರಾಘವೇಂದ್ರ ಎಸ್, ಜಂಟಿ ಕಾರ್ಯದರ್ಶಿ ರಮೇಶ್, ಕಾಡಪ್ಪ ಗೌಡ, ರಾಜೇಶ್ವರಿ, ದುಗ್ಗಣ್ಣ, ಹನುಮಂತ ರೆಡ್ಡಿ ನಚಿಕೇತ್ ಎಸ್ ಶೆಟ್ಟಿ ,ಶ್ರೀನಿವಾಸ್, ಮತ್ತಿತರರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...