Thursday, May 1, 2025
Google search engine
Homeರಾಜ್ಯ10 ವರ್ಷ ಕಳೆದರೂ ಬರೀ 10 ಸಾವಿರ ಸಂಬಳ ಖಾಯಂ ಆಗದ ಉದ್ಯೋಗ, ಗೃಹ ಸಚಿವರಿಗೆ...

10 ವರ್ಷ ಕಳೆದರೂ ಬರೀ 10 ಸಾವಿರ ಸಂಬಳ ಖಾಯಂ ಆಗದ ಉದ್ಯೋಗ, ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಆರೋಗ್ಯ ಸಿಬ್ಬಂದಿಗಳು..!

ಶಿವಮೊಗ್ಗ >ಸೆಪ್ಟೆಂಬರ್> 19>ತೀರ್ಥಹಳ್ಳಿ>ರಾಜ್ಯದಲ್ಲಿ ಕಳೆದ 13- 14 ವರ್ಷಗಳಿಂದ ಸುಮಾರು120 ಜನ, ಶಿವಮೊಗ್ಗ ಜಿಲ್ಲೆಯಲ್ಲಿ 25 ಜನ, ನಿರಂತರವಾಗಿ ಆರೋಗ್ಯ ಇಲಾಖೆಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಆಗಿ ಕಾರ್ಯನಿರ್ವಹಿಸುತ್ತಿದ್ದು.

ಇವರಿಗೆ ಇವರ ವೃತ್ತಿ ಖಾಯಂ ಆಗಿಲ್ಲ, ಸಂಬಳದಲ್ಲೂ ಹೆಚ್ಚಳವಾಗಿಲ್ಲ, ಇತ್ತೀಚಿಗೆ ಬಂದು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹೋಲಿಸಿದರೆ ಇವರಿಗೆ ಕೊಡುವ ಸಂಬಳ ತೀರಾ ಕಡಿಮೆ ಈ ಸಂಬಳದಲ್ಲಿ ತಮ್ಮ ಕುಟುಂಬವನ್ನು ನಿರ್ವಹಿಸುವ ಅನಿವಾರ್ಯತೆ ಇವರ ಹೆಗಲ ಮೇಲಿದೆ.

ಸದ್ಯದಲ್ಲೇ ಖಾಯಂ ಆಗಬಹುದು ಎನ್ನುವ ನಿರೀಕ್ಷೆಯಲ್ಲಿ ಸಿಬ್ಬಂದಿಗಳು:

ತಾವು ಮಾಡುವ ವೃತ್ತಿ ಸದ್ಯದಲ್ಲೇ ಖಾಯಂ ಆಗಬಹುದು ಎನ್ನುವ ನಿರೀಕ್ಷೆಯಲ್ಲಿ ಇಷ್ಟು ವರ್ಷಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಗೃಹಸಚಿವರ ಬಳಿ ತಮ್ಮ ನೋವು ಹೇಳಿಕೊಂಡ ಆರೋಗ್ಯ ಸಿಬ್ಬಂದಿಗಳು ಆರೋಗ್ಯ ಸಚಿವರ ಗಮನಕ್ಕೆ ತರುವಂತೆ ಮನವಿ:

ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ ಬೇಟಿ ನೀಡಿದ ಆರೋಗ್ಯ ಸಿಬ್ಬಂದಿಗಳು ತಮ್ಮ ನೋವನ್ನು ಹಂಚಿಕೊಂಡರು. ಆದಷ್ಟು ಬೇಗ ನಮ್ಮ ವೃತ್ತಿಯನ್ನು ಖಾಯಂಗೊಳಿಸಬೇಕು ನಮಗೆ ಆಗುತ್ತಿರುವ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ತಮ್ಮ ಅಳಲು ತೋಡಿಕೊಂಡರು.

ಸಕಾರಾತ್ಮಕವಾಗಿ ಸ್ಪಂದಿಸಿರುವ ಗೃಹ ಸಚಿವರು:

ಆರೋಗ್ಯ ಸಿಬ್ಬಂದಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಗೃಹ ಸಚಿವರು ಕೂಡಲೇ ಇದನ್ನು ಆರೋಗ್ಯ ಸಚಿವರ ಗಮನಕ್ಕೆ ತರುತ್ತೇನೆ. ಆದಷ್ಟು ಬೇಗ ಈ ಸಮಸ್ಯೆಗೆ ಒಂದು ಅಂತ್ಯ ಹಾಡುವ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಆರೋಗ್ಯ ಸಿಬ್ಬಂದಿಗಳ ಸಂಕಷ್ಟಕ್ಕೆ ಕೈಜೋಡಿಸಿದ ಜಿಲ್ಲಾ ಪಂಚಾಯತ್ ಸದಸ್ಯರಾದ ಶರಧಿ ಪೂರ್ಣೇಶ್:
ಇಂದು ಮುಂಜಾನೆ ಗೃಹಸಚಿವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಸದಸ್ಯರಾದ ಶರಧಿ ಪೂರ್ಣೇಶ್ ಅವರು ಆರೋಗ್ಯ ಸಿಬ್ಬಂದಿಗಳ ಜೊತೆಗೆ ತೆರಳಿ ಅವರ ಸಂಕಷ್ಟದಲ್ಲಿ ತಾವು ಜೊತೆಯಾದರು. ಈ ಸಂದರ್ಭದಲ್ಲಿ, ಆರೋಗ್ಯ ಸಿಬ್ಬಂದಿಗಳ ಜೊತೆ PHCO ಅಧ್ಯಕ್ಷರಾದ ರೂಪ ಬಾವಿ ಕೈಸೆರ, ಹಾಗೂ ಆರೋಗ್ಯ ಸಿಬ್ಬಂದಿಗಳಾದ ರೂಪಶ್ರೀ, ಸೌಮ್ಯ, ವಸಂತಿ, ಸುಪ್ರೀತಾ, ಸುಚಿತ್ರ, ದಿವ್ಯ, ಶಶಿಕಲಾ, ಪೂಜಾ, ಉಮ್ಮೆ ಸಲ್ಮಾ, ಮೊದಲಾದವರು ಹಾಜರಿದ್ದರು..

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ..9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...