Home ಬೆಂಗಳೂರುBreaking news: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್..!

Breaking news: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್..!

by EDITOR NEWS WARRIORS
0 comments

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾ ಅಧಿಕಾರಿಯಾದ ಎ ಹನುಮ ನರಸಯ್ಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024/2025 ನೇ ಅವಧಿಯ ಜಿಲ್ಲೆ ತಾಲೂಕು ಯೋಜನಾ ಶಾಖೆಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯ ಸ್ಥಾನದ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ದಿನಾಂಕ 12.09.2024ರಂದು ಸಂಘದ ಚುನಾವಣೆ ಅಧಿಕಾರಿಗಳು ಚುನಾವಣೆ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.

ಅದರಂತೆ ದಿನಾಂಕ 17.09.2024 ರಂದು ಬೆಂಗಳೂರಿನ ನಗರ ರಾಜ್ಯ ಪರಿಷತ್ ಸದಸ್ಯ ಸ್ಥಾನದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಈಗಾಗಲೇ ಅಂತಿಮವಾಗಿ ಚುನಾವಣೆ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿ ಹಾಗೂ ಅವಿರೋಧವಾಗಿ ಆಯ್ಕೆ ಆದವರ ಪಟ್ಟಿಯನ್ನು ಪ್ರಕಟಿಸಲಾಗಿದೆ ಮುಂದುವರೆದು ಅವಿರೋಧವಾಗಿ ಆಯ್ಕೆಯಾದ ಮತಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಮತಕ್ಷೇತ್ರಗಳ ಚುನಾವಣೆಗಳು 8/10/2024 ರಿಂದ ಆರಂಭವಾಗಬೇಕಿತ್ತು.

ಆದರೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಸಂಬಂಧ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಕೃಷ್ಣಯ್ಯ ದ್ವಿತೀಯ ದರ್ಜೆಯ ಸಹಾಯಕ ಇವರು ಬೆಂಗಳೂರು ನಗರ ಸಿಟಿಲ್ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು .

ಈ ಸಂಬಂಧ ನ್ಯಾಯಾಲಯವು ಎದುರುದಾರರಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಯಾವುದೇ ಮಾಹಿತಿ ನೀಡದೆ ಎಕ್ಸ್ ಪಾರ್ಟಿ ಮಾಡಿ ಚುನಾವಣೆ ಅಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ತಡೆಯಾಗಿ ನೀಡಿದ್ದು ಈ ಸಂದರ್ಭದಲ್ಲಿ ದೂರುದಾರರು ಸಂಘದ ಹಳೆಯ ಬೈಲಾವನ್ನು ಸಲ್ಲಿಸಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿರುತ್ತಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಪ್ರಕರಣ ದಾಖಲಿಸಿದ್ದು ಮಾನ್ಯ ನ್ಯಾಯಾಲಯ ದಾವೆಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿ ಪೂರಕ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಕೃಷ್ಣಯ್ಯನವರು ದೂರು ಸಂಬಂಧಿಸಿದಂತೆ ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯವು ನೀಡಿದ ಮಧ್ಯಂತರ ತಡೆಯಾಜ್ಞೆ ಆದೇಶಕ್ಕೆ ವಿನಾಯಿತಿ ನೀಡಿ ಚುನಾವಣಾ ಮುಂದುವರಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶ ನೀಡಿದೆ.

ಉಚ್ಚ ನ್ಯಾಯಾಲಯದ ಆದೇಶದಂತೆ ಆದೇಶದಂತೆ ಈಗಾಗಲೇ ನಿಗದಿಪಡಿಸಿದ ದಿನಾಂಕ 12 /9/ 2024 ಎಲ್ಲಾ ಹಂತದ ಚುನಾವಣೆಗಳು ಯಥವತ್ತಾಗಿ ಮುಂದುವರೆಯಲಿವೆ.

ಆರುಷ್ ರಾಜ್ 9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...