Wednesday, April 30, 2025
Google search engine
Homeಶಿವಮೊಗ್ಗಆರೋಗ್ಯವೈದ್ಯವಿಜ್ಞಾನವು ವ್ಯಕ್ತಿಯು ಸಾವನ್ನು ಘನತೆಯಿಂದ ಸ್ವೀಕರಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಚಾರ ಮಾಡಬೇಕು” ಉಪ...

ವೈದ್ಯವಿಜ್ಞಾನವು ವ್ಯಕ್ತಿಯು ಸಾವನ್ನು ಘನತೆಯಿಂದ ಸ್ವೀಕರಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಚಾರ ಮಾಡಬೇಕು” ಉಪ ಕುಲಪತಿ ಪ್ರೊ ಶರತ್ ಅನಂತಮೂರ್ತಿ ..!

“ವೈದ್ಯವಿಜ್ಞಾನವು ವ್ಯಕ್ತಿಯು ಸಾವನ್ನು ಘನತೆಯಿಂದ ಸ್ವೀಕರಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವಿಚಾರ ಮಾಡಬೇಕು” ಎಂದು ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ ಶರತ್ ಅನಂತಮೂರ್ತಿ ಹೇಳಿದರು.

ಅವರು ಭಾರತೀಯ ವೈದ್ಯಕೀಯ ಸಂಘ, ಶಿವಮೊಗ್ಗ ಶಾಖೆಯ 2024-25ನೇ ಅವಧಿಯ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ಭಾರತೀಯ ವೈದ್ಯಕೀಯ ಸಂಘದ ಯೂಟ್ಯೂಬ್ ಚಾನೆಲ್ ಗೆ ಚಾಲನೆ ಕೊಟ್ಟರು. ಮೊದಲ ಯೂಟ್ಯೂಬ್ ವೀಡಿಯೊದಲ್ಲಿ ನಿಯೋಜಿತ ಅಧ್ಯಕ್ಷ ಡಾ ರವೀಶ್ ಕೆ ಆರ್ ನಿರೂಪಿಸಿದ ಶಿವಮೊಗ್ಗ ಐ ಎಂ ಎ ನಡೆದು ಬಂದ ದಾರಿಯ ವಿವರಣೆ ಇದ್ದು ಎಲ್ಲ ಸದಸ್ಯರೂ ಮೆಚ್ಚುಗೆ ವ್ಯಕ್ತ ಪಡಿಸಿದರು.

ಭಾರತೀಯ ವೈದ್ಯಕೀಯ ಸಂಘದ ಈ ಬಾರಿಯ ಅಧ್ಯಕ್ಷರಾಗಿರುವ ಡಾ ಶ್ರೀಧರ ಎಸ್ ನಮ್ಮ ಸಂಘವು ಸಾರ್ವಜನಿಕರಲ್ಲಿ ಆರೋಗ್ಯದ ಅರಿವನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದರು.

ಡಾ ಮೈಥಿಲಿಯವರ ಸುಮಧುರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸಂಘದ ಕಾರ್ಯದರ್ಶಿ ಡಾ ವಿನಯ ಶ್ರೀನಿವಾಸ್ ಎಲ್ಲರನ್ನು ಸ್ವಾಗತಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಡಾ ವಿಶಾಲಾಕ್ಷಿ ಮೂಗಿ ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಪೂರ್ವಾಧ್ಯಕ್ಷ ಡಾ ಸಿ ರಮೇಶ್, ಡಾ ಅರವಿಂದನ್ ಆರ್, ಡಾ ಭಾಗ್ಯಶ್ರೀ ಕಟಾರಿ ಉಪಸ್ಥಿತರಿದ್ದರು. ಡಾ ಪ್ರೀತಿ ಪೈ ಕಾರ್ಯಕ್ರಮದ ನಿರೂಪಣೆ ಮಾಡಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...