Home ಶಿಕ್ಷಣಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಾರದ ಕಾರ್ಯಭಾರ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಗೆ ಪ್ರಾಂಶುಪಾಲರು ಉಪನ್ಯಾಸಕರಿಂದ ಮನವಿ..!

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಾರದ ಕಾರ್ಯಭಾರ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಗೆ ಪ್ರಾಂಶುಪಾಲರು ಉಪನ್ಯಾಸಕರಿಂದ ಮನವಿ..!

by EDITOR NEWS WARRIORS

ಶಿವಮೊಗ್ಗ; ರಾಜ್ಯದ ಪದವಿ ಕಾಲೇಜುಗಳಲ್ಲಿ ಎಸ್.ಇ.ಪಿ.ಜಾರಿಯಾಗಿದ್ದರಿಂದ ವಾರದ ಕಾರ್ಯಭಾರ ಕಡಿಮೆಯಾಗಿದೆ. ಬೇರೆ ವಿಶ್ವವಿದ್ಯಾಲಯಗಳಲ್ಲಿ ಇದನ್ನು ವಾರಕ್ಕೆ 5 ಅವಧಿ ಇದ್ದಿದ್ದನ್ನು 6 ಅವಧಿಗೆ ಹೆಚ್ಚಿಸ ಬೇಕು ಎಂದು ಕುವಿವಿ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಶಾಸಕರೂ ಆದ ವಿವಿ ಅಕಾಡೆಮಿಕ್ ಕೌನ್ಸಿಲ್ಲಿನ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಎನ್.ಇ.ಪಿ.ರದ್ದಾಗಿ ಎಸ್.ಇ.ಪಿ.ಜಾರಿಯಾಗಿದೆ. ಎನ್.ಇ.ಪಿ.ಯಲ್ಲಿದ್ದುದಕ್ಕಿಂತ ಕಾರ್ಯಭಾರ ಎಸ್.ಇ.ಪಿ.ಪಠ್ಯಕ್ರಮದಲ್ಲಿ ಕಡಿಮೆಯಾಗಿದೆ. ಪಠ್ಯಕ್ರಮ ಮುಗಿಸುವಲ್ಲಿ ಉಪನ್ಯಾಸಕರಿಗೆ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಸರಿಯಾಗುವುದರಲ್ಲಿ ಅನುಮಾನವಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ವಾರದ ಕಾರ್ಯಭಾರದಲ್ಲಿ ಪ್ರತಿ ವಿಷಯಕ್ಕೆ ಒಂದು ಅವಧಿ ಹೆಚ್ಚು ಮಾಡಿ 6 ಅವಧಿ ಮಾಡಬೇಕೆಂದು ಒತ್ತಾಯಿಸಲಾಯಿತು.

ವಾರಕ್ಕೆ 5 ಅವಧಿ ನಿಗಧಿಪಡಿಸಿದ್ದರಿಂದ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಭವಿಷ್ಯಕ್ಕೂ ಕುತ್ತು ಬರಲಿದೆ ಎಂಬ ಆತಂಕ ವ್ಯಕ್ತಪಡಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಯಿಂದ ಕಾಲೇಜುಗಳಿಗಾಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಈ ಕುರಿತು ಶಾಸಕ ಅರುಣ್ ಅವರು ವಿವಿ ಕುಲಪತಿಗಳನ್ನು ಸಂಪರ್ಕಿಸಿ ಮಾತನಾಡಲು ಫೋನ್ ಮಾಡಿ ಪ್ರಯತ್ನಿಸಿದರೂ ಫೋನ್ ಸ್ವೀಕಾರವಾಗಿಲ್ಲದ ಕಾರಣ ನಂತರ ಅವರ ಜೊತೆ ಮಾತನಾಡುವುದಾಗಿ ಅರುಣ್ ತಿಳಿಸಿದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜು ಪ್ರಾಚಾರ್ಯ ಡಾ.ಸನಾವುಲ್ಲಾ, ಡಾ.ಬಾಲಕೃಷ್ಣ ಹೆಗಡೆ ಡಾ.ಸುರೇಶ್ , ಡಾ.ರಂಗನಾಥ್, ಅರುಣ್ ಕುಮಾರ್ ಡಾ.ಸಕ್ರಾ ನಾಯ್ಕ್, , ಡಾ.ಮೋಹನ್ ಮೊದಲಾದವರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!