Tuesday, April 29, 2025
Google search engine
Homeಶಿಕ್ಷಣಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಾರದ ಕಾರ್ಯಭಾರ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಗೆ ಪ್ರಾಂಶುಪಾಲರು...

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಾರದ ಕಾರ್ಯಭಾರ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಗೆ ಪ್ರಾಂಶುಪಾಲರು ಉಪನ್ಯಾಸಕರಿಂದ ಮನವಿ..!

ಶಿವಮೊಗ್ಗ; ರಾಜ್ಯದ ಪದವಿ ಕಾಲೇಜುಗಳಲ್ಲಿ ಎಸ್.ಇ.ಪಿ.ಜಾರಿಯಾಗಿದ್ದರಿಂದ ವಾರದ ಕಾರ್ಯಭಾರ ಕಡಿಮೆಯಾಗಿದೆ. ಬೇರೆ ವಿಶ್ವವಿದ್ಯಾಲಯಗಳಲ್ಲಿ ಇದನ್ನು ವಾರಕ್ಕೆ 5 ಅವಧಿ ಇದ್ದಿದ್ದನ್ನು 6 ಅವಧಿಗೆ ಹೆಚ್ಚಿಸ ಬೇಕು ಎಂದು ಕುವಿವಿ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಶಾಸಕರೂ ಆದ ವಿವಿ ಅಕಾಡೆಮಿಕ್ ಕೌನ್ಸಿಲ್ಲಿನ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಎನ್.ಇ.ಪಿ.ರದ್ದಾಗಿ ಎಸ್.ಇ.ಪಿ.ಜಾರಿಯಾಗಿದೆ. ಎನ್.ಇ.ಪಿ.ಯಲ್ಲಿದ್ದುದಕ್ಕಿಂತ ಕಾರ್ಯಭಾರ ಎಸ್.ಇ.ಪಿ.ಪಠ್ಯಕ್ರಮದಲ್ಲಿ ಕಡಿಮೆಯಾಗಿದೆ. ಪಠ್ಯಕ್ರಮ ಮುಗಿಸುವಲ್ಲಿ ಉಪನ್ಯಾಸಕರಿಗೆ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಸರಿಯಾಗುವುದರಲ್ಲಿ ಅನುಮಾನವಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ವಾರದ ಕಾರ್ಯಭಾರದಲ್ಲಿ ಪ್ರತಿ ವಿಷಯಕ್ಕೆ ಒಂದು ಅವಧಿ ಹೆಚ್ಚು ಮಾಡಿ 6 ಅವಧಿ ಮಾಡಬೇಕೆಂದು ಒತ್ತಾಯಿಸಲಾಯಿತು.

ವಾರಕ್ಕೆ 5 ಅವಧಿ ನಿಗಧಿಪಡಿಸಿದ್ದರಿಂದ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಭವಿಷ್ಯಕ್ಕೂ ಕುತ್ತು ಬರಲಿದೆ ಎಂಬ ಆತಂಕ ವ್ಯಕ್ತಪಡಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಯಿಂದ ಕಾಲೇಜುಗಳಿಗಾಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಈ ಕುರಿತು ಶಾಸಕ ಅರುಣ್ ಅವರು ವಿವಿ ಕುಲಪತಿಗಳನ್ನು ಸಂಪರ್ಕಿಸಿ ಮಾತನಾಡಲು ಫೋನ್ ಮಾಡಿ ಪ್ರಯತ್ನಿಸಿದರೂ ಫೋನ್ ಸ್ವೀಕಾರವಾಗಿಲ್ಲದ ಕಾರಣ ನಂತರ ಅವರ ಜೊತೆ ಮಾತನಾಡುವುದಾಗಿ ಅರುಣ್ ತಿಳಿಸಿದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜು ಪ್ರಾಚಾರ್ಯ ಡಾ.ಸನಾವುಲ್ಲಾ, ಡಾ.ಬಾಲಕೃಷ್ಣ ಹೆಗಡೆ ಡಾ.ಸುರೇಶ್ , ಡಾ.ರಂಗನಾಥ್, ಅರುಣ್ ಕುಮಾರ್ ಡಾ.ಸಕ್ರಾ ನಾಯ್ಕ್, , ಡಾ.ಮೋಹನ್ ಮೊದಲಾದವರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...