Wednesday, April 30, 2025
Google search engine
Homeಶಿವಮೊಗ್ಗShivamogga: ಗ್ರಾಮಾಂತರ ಪೊಲೀಸರ ಖಡಕ್ ಕಾರ್ಯಾಚರಣೆ ಮೂವರು ಬೈಕ್ ಕಳ್ಳರ ಬಂಧನ..! 7 ಬೈಕ್ ವಶ..!

Shivamogga: ಗ್ರಾಮಾಂತರ ಪೊಲೀಸರ ಖಡಕ್ ಕಾರ್ಯಾಚರಣೆ ಮೂವರು ಬೈಕ್ ಕಳ್ಳರ ಬಂಧನ..! 7 ಬೈಕ್ ವಶ..!

ಶಿವಮೊಗ್ಗ: ಕಳೆದ ಎರಡು ದಿನದ ಹಿಂದೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಎಸ್ ಸ ವೆಂಕಟೇಶ್ ,ರಾಘವೇಂದ್ರ ಪಿ ಸಿ , ಕವನ ಕಾಶಿನಾಥ್ ಗಣೇಶ್ ಶ್ರೀಕಾಂತ್ ಮತ್ತು ಬಸವರಾಜ್ ಅವರುಗಳನ್ನು ಒಳಗೊಂಡ ತಂಡ ಪುರಲೆಯ ಬಳಿ ಇರುವ ಸುಬ್ಬಯ್ಯ ಮೆಡಿಕಲ್ ಹಿಂಭಾಗ ಗಸ್ತಿನಲ್ಲಿ ತಿರುಗುತ್ತಿದ್ದಾಗ ಮೂವರು ಅನುಮಾನಾಸ್ಪದ ವ್ಯಕ್ತಿಗಳು ಎರಡು ಬೈಕುಗಳನ್ನು ನಿಲ್ಲಿಸಿಕೊಂಡಿದ್ದರು ಅನುಮಾನ ಬಂದು ಸತ್ಯನಾರಾಯಣ, ಪಿ.ಐ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ಮುಂದೆ ಹಾಜರ್ ಪಡಿಸಿದ್ದು, ಸದರಿ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದಾಗ 1) ಇಮ್ರಾನ್ @ ಇಮ್ಮು, 2) ಮದನ್ ಕುಮಾರ್ @ ಗುಂಡಾ ಮತ್ತು 3) ಹರೀಶ ಎನ್ ಎಂದು ತಿಳಿದು ಬಂದಿದ್ದು, ಸದರಿಯವರು ಎರಡೂ ಬೈಕ್ ಗಳನ್ನು ಶಿಕಾರಿಪುರದಲ್ಲಿ ಕಳ್ಳತನ ಮಾಡಿಕೊಂಡು ತಂದಿರುವುದು ಮತ್ತು ಇದೇ ರೀತಿ ಇನ್ನೂ ಹೆಚ್ಚಿನ ಬೈಕ್ ಗಳನ್ನು ಕಳ್ಳತನ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ. ಆದ್ದರಿಂದ ಆರೋಪಿತರ ವಿರುದ್ಧ ಠಾಣಾ ಗುನ್ನೆ ಸಂಖ್ಯೆ 0336/2024 ಕಲಂ 35(ಬಿ), 106 ಬಿ.ಎನ್.ಎಸ್.ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ

  
  ಆರೋಪಿತರಿಂದ ಕಳ್ಳತನ ಮಾಡಿದ ಬೈಕ್ ಗಳನ್ನು ವಶಪಡಿಸಿಕೊಳ್ಳುವ ಸಂಬಂಧ   ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ. ಕೆ.  ಅನಿಲ್ ಕುಮಾರ್ ಭೂಮಾರಡ್ಡಿ  ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 1 ಶಿವಮೊಗ್ಗ ಜಿಲ್ಲೆ ಮತ್ತು   ಕಾರಿಯಪ್ಪ ಎ.ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ,   ಸುರೇಶ್  ಉಪಾಧೀಕ್ಷಕರು ಶಿವಮೊಗ್ಗ ಬಿ  ಉಪವಿಭಾಗರವರ ರವರ ಮೇಲ್ವಿಚಾರಣೆಯಲ್ಲಿ,   ಸತ್ಯನಾರಾಯಣ, ಪಿಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳಾದ  ಹೆಚ್ ಸಿ ವೆಂಕಟೇಶ್, ರಾಘವೇಂದ್ರ, ಪಿಸಿ ಕವನ್, ಕಾಶಿನಾಥ್, ಗಣೇಶ್, ಶ್ರೀಕಾಂತ್, ಮತ್ತು ಬಸವರಾಜ್ ದನುವಿನ ಮನಿ ರವರುಗಳನ್ನೊಳಗೊಂಡ  ತನಿಖಾ ತಂಡವನ್ನು ರಚಿಸಲಾಗಿರುತ್ತದೆ. 

ಸದರಿ ತನಿಖಾ ತಂಡವು ಆರೋಪಿತರಾದ 1) ಇಮ್ರಾನ್ @ ಇಮ್ಮು, 26 ವರ್ಷ, ಮೆಕಾನಿಕ್ ಕೆಲಸ, ಸೀತಾರಾಂಪುರ ಭದ್ರಾವತಿ, 2) ಮದನ್ ಕುಮಾರ್ @ ಗುಂಡಾ, 18 ವರ್ಷ, ವುಡ್ ವರ್ಕ್, ಸೀತಾರಾಂಪುರ ಭದ್ರಾವತಿ ಮತ್ತು 3) ಹರೀಶ ಎನ್ 18 ವರ್ಷ, ಗಾರೆ ಕೆಲಸ, ಸೀತಾರಾಂಪುರ ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಹೊಳೆಹೊನ್ನೂರು ಪೊಲೀಸ್ ಠಾಣೆಯ – 03, ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ – 02, ತುಂಗಾನಗರ ಪೊಲೀಸ್ ಠಾಣೆಯ – 01 ಮತ್ತು ಜಯನಗರ ಪೊಲೀಸ್ ಠಾಣೆಯ – 01 ಪ್ರಕರಣ ಸೇರಿದಂತೆ ಒಟ್ಟು 07 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 9,40,000/- ರೂ ಗಳ 07 ದ್ವಿ ಚಕ್ರ ವಾಹನ ( 04 ಪಲ್ಸರ್, 01 ಅಪಾಚೆ, 01 ಸ್ಪ್ಲೆಂಡರ್ ಮತ್ತು 01 ರಾಯಲ್ ಎನ್ ಫೀಲ್ಡ್ ಹಿಮಾಲಯನ್) ಗಳನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ವರಿಷ್ಟಾಧಿಕಾರಿಗಳು, ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...