Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024ರ ಸಮಾರೋಪ ಸಮಾರಂಭ..!

ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024ರ ಸಮಾರೋಪ ಸಮಾರಂಭ..!

ಶಿವಮೊಗ್ಗ: 04-12-2024 ರಿಂದ ನಡೆಯುತ್ತಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024 ರ ಸಮಾರೋಪ ಸಮಾರಂಭವನ್ನು ಈ ದಿನ ದಿನಾಂಕ: 06-12-2024 ರಂದು ಸಂಜೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಮಿಥುನ್ ಕುಮಾರ್, ಜಿ.ಕೆ, ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತವನ್ನು ಕೋರಿದರು,

ರಮೇಶ್ ಬಿ, ಐಪಿಎಸ್, ಉಪ ಪೊಲೀಸ್ ಮಹಾನಿರೀಕ್ಷಕರು, ಪೂರ್ವ ವಲಯ, ದಾವಣಗೆರೆ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಸದರಿ ಕ್ರೀಡಾ ಕೂಟದಲ್ಲಿ ಭಾಗವಹಿಸಿ ವಿವಿಧ ಪಂದ್ಯಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗೂ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಣೆ ಮಾಡಿ, ಅಭಿನಂದನೆ ಸಲ್ಲಿಸಿದರು.

ಸಮಾರಂಭದಲ್ಲಿ ಹಾಜರಿದ್ದವರ ಕುರಿತು ಮಾತನಾಡಿ ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳಿಗೆ ಒತ್ತಡ ನಿರ್ವಹಣೆಯು ಮುಖ್ಯವಿದ್ದು, ಈ ರೀತಿ ಕ್ರೀಡಾ ಕೂಟವನ್ನು ಆಯೋಜಿಸುವುದರಿಂದ ಒತ್ತಡ ನಿರ್ವಹಣೆಗೆ ಅನುಕೂಲವಾಗಲಿದೆ. ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯು ಸಹಕಾರಿಯಾಗಲಿದ್ದು, ಆದ್ದರಿಂದ ನಿಮ್ಮ ದೈನಂದಿನ ಜೀವನದಲ್ಲಿ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ ಹಾಗೂ ಕರ್ತವ್ಯದ ಜೊತೆಗೆ ಕುಟುಂಭಕ್ಕೂ ಸಹ ಸಮಯಕೊಡಿ ಎಂದು ಹೇಳಿದರು. ನಂತರ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ರವರು ಎಲ್ಲರಿಗೂ ವಂದನಾರ್ಪಣೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ, ಕೃಷ್ಣಮೂರ್ತಿ, ಡಿವೈಎಸ್ಪಿ ಡಿಎಆರ್ ಶಿವಮೊಗ್ಗ, ನಾಗರಾಜ್, ಡಿವೈಎಸ್ಪಿ ಭದ್ರಾವತಿ ಉಪ ವಿಭಾಗ, ಗೋಪಾಲ ಕೃಷ್ಣ ಟಿ ನಾಯಕ್, ಡಿವೈಎಸ್ಪಿ, ಸಾಗರ ಉಪ ವಿಭಾಗ, ಬಾಬು ಆಂಜನಪ್ಪ,ಡಿವೈಎಸ್ಪಿ, ಶಿವಮೊಗ್ಗ-ಎ ಉಪ ವಿಭಾಗ, ಕೇಶವ್, ಡಿವೈಎಸ್ಪಿ, ಶಿಕಾರಿಪುರ ಉಪ ವಿಭಾಗ, ಸುರೇಶ್ ಎಂ, ಡಿವೈಎಸ್ಪಿ, ಶಿವಮೊಗ್ಗ-ಬಿ ಉಪ ವಿಭಾಗ, ಗಜಾನನ ವಾಮನ ಸುತರ, ಡಿವೈಎಸ್ಪಿ, ತೀರ್ಥಹಳ್ಳಿ ಉಪ ವಿಭಾಗ ಮತ್ತು ಕೃಷ್ಣ ಮೂರ್ತಿ,ಡಿವೈಎಸ್ಪಿ ಸಿಇಎನ್ ಪೊಲೀಸ್ ಠಾಣೆ ಶಿವಮೊಗ್ಗ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂಧಿಗಳು ಉಪಸ್ಥಿತರಿದ್ದರು.

     
RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...