Wednesday, April 30, 2025
Google search engine
Homeಶಿವಮೊಗ್ಗದೇವಸ್ಥಾನದ ಹೆಸರಿನಲ್ಲಿ ಮರಳು ದಂಧೆ..! ಯಾರಿದ್ದಾರೆ ಇದರ ಹಿಂದೆ..?! ದಂಧೆಗೆ ಬ್ರೇಕ್ ಹಾಕಿ 4 ಜೆಸಿಬಿ...

ದೇವಸ್ಥಾನದ ಹೆಸರಿನಲ್ಲಿ ಮರಳು ದಂಧೆ..! ಯಾರಿದ್ದಾರೆ ಇದರ ಹಿಂದೆ..?! ದಂಧೆಗೆ ಬ್ರೇಕ್ ಹಾಕಿ 4 ಜೆಸಿಬಿ ವಶಪಡಿಸಿಕೊಂಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆ..!

ಶಿವಮೊಗ್ಗ: ಜಿಲ್ಲೆಯ ಹಲವು ಕಡೆ ದೇವಸ್ಥಾನದ ಹೆಸರಿನಲ್ಲಿ ಅಕ್ರಮವಾಗಿ ಮರಳು ದಂಧೆ ಮಾಡುವವರ ಜೊತೆ ಕೈಜೋಡಿಸಿ ಕೆಲವು ಗ್ರಾಮದ ಗ್ರಾಮಸ್ಥರು ಮರಳು ಲೂಟಿ ಮಾಡುತ್ತಿದ್ದಾರೆ.

ಈ ಅನಧಿಕೃತ ದಂದೆಗೆ ಬ್ರೇಕ್ ಹಾಕಲು ಮುಂದಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇಂದು ಮುಂಜಾನೆ ಸುಮಾರು 3:30ರ ಹೊತ್ತಿಗೆ ಜೆಸಿಬಿಯನ್ನು ಬಳಸಿ ಮರಳನ್ನು ಎತ್ತುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಹೊಳೆಹಟ್ಟಿ, ಸಿದ್ದರಳ್ಳಿ , ಮತ್ತೂರು ಕಡೆಕಲ್ಲು, ಭಾಗದ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿ ನಾಲ್ಕು ಜೆಸಿಬಿಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇಂದು ಮುಂಜಾನೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪಿಕೆ ನಾಯ್ಕ್ ನೇತೃತ್ವದಲ್ಲಿ ಭೂ ವಿಜ್ಞಾನಿ ಪ್ರಿಯಾ ಗೌಡರ್ ಮತ್ತು ಸಿಬ್ಬಂದಿಗಳ ಒಳಗೊಡ ತಂಡ ದಾಳಿ ನಡೆಸಿ ಜೆಸಿಬಿಗಳನ್ನು ವಶಪಡಿಸಿಕೊಂಡು ನಂಬರ್ ಪ್ಲೇಟ್ ಗಳು ಇಲ್ಲದ ಜೆಸಿಬಿಗಳನ್ನು ತಮ್ಮ ಕಚೇರಿಯಲ್ಲಿ ಇಟ್ಟುಕೊಂಡು ಅಕ್ರಮ ಮರಳು ದಂದೆಯ ಹಿಂದೆ ಯಾರಿದ್ದಾರೆ..? ಎನ್ನುವ ತನಿಖೆ ನಡೆಸುತ್ತಿದ್ದಾರೆ.

ದೇವರ ಹೆಸರಿನಲ್ಲಿ ಲಕ್ಷಾಂತರ ಲೂಟಿ…?!

ಹಲವು ಗ್ರಾಮಗಳಲ್ಲಿ ದೇವಸ್ಥಾನದ ಹೆಸರಿನಲ್ಲಿ ತಾವೇ ಹಣವನ್ನು ನಿಗದಿಪಡಿಸಿ ಲಕ್ಷಾಂತರ ಹಣವನ್ನು ಪಾವತಿಸುವಂತೆ ಅಕ್ರಮ ಮರಳು ದಂಧೆ ಅವರ ಜೊತೆ ಕೈಜೋಡಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟಿಗಟ್ಟಲೆ ಹಣ ನಷ್ಟ ಉಂಟು ಮಾಡುತ್ತಿದ್ದು ಇದನ್ನು ಪೋಲಿಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕೂಡ ಗಂಭೀರವಾಗಿ ಪರಿಗಣಿಸಿ ಅಂಥವರ ವಿರುದ್ಧ ಕಾನೂನು ರೀತಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಶಪಡಿಸಿಕೊಂಡಿರುವ ಜೆಸಿಬಿಗಳ ಮಾಲೀಕರ ವಿರುದ್ಧ ಹಾಗೂ ಈ ಅಕ್ರಮ ಮರಳು ದಂಧೆಯ ಮಾಡುವವರ ವಿರುದ್ಧ ಸಮಗ್ರ ತನಿಖೆ ನಡೆಸಿ ಜಾಮೀನು ಸಿಕ್ಕದ ಹಾಗೆ ಎಫ್ ಐ ಆರ್ ದಾಖಲಿಸಿ ಈ ದಂಧೆಗೆ ಕಡಿವಾಣ ಹಾಕಬೇಕು ಎನ್ನುವುದು ಈ ಶಾಮಿಲ್ ಆಗಿರದ ಗ್ರಾಮಸ್ಥರ ಮನವಿ ಹಾಗೂ ಆಗ್ರಹ.

ರಘುರಾಜ್ ಹೆಚ್.ಕೆ..9449553305..

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...