Sunday, June 15, 2025
Google search engine
Homeಶಿವಮೊಗ್ಗShivamogga:ಹೊಸ ವರ್ಷ ಸಂಭ್ರಮಾಚರಣೆ ಗೆ ಎಸ್ ಪಿ ನೀಡಿದ 8 ಮಹತ್ವದ ಸೂಚನೆಗಳೇನು..?!

Shivamogga:ಹೊಸ ವರ್ಷ ಸಂಭ್ರಮಾಚರಣೆ ಗೆ ಎಸ್ ಪಿ ನೀಡಿದ 8 ಮಹತ್ವದ ಸೂಚನೆಗಳೇನು..?!

ಇನ್ನೇನು ಕೆಲವೇ ದಿನಗಳಲ್ಲಿ 2024 ಮುಕ್ತಾಯ ಗೊಳ್ಳಲಿದೆ ಹೊಸ ವರ್ಷ 2025ರ ಸಂಭ್ರಮಾಚರಣೆ ಗೆ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ.ಕೆ, ನೇತೃತ್ವದಲ್ಲಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಎಂಟು ಮಹತ್ವದ ಸೂಚನೆಗಳನ್ನು ನೀಡಿದರು.

1) ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ,ಸರಹದ್ದಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವುದು. ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ / ಅನುಮತಿ ಪಡೆಯದೇ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

2) ಕಾರ್ಯಕ್ರಮ ಆಯೋಜಿಸುವವರು ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡುವುದು ಹಾಗೂ ಆಯೋಜಿಸಲಾಗುವ ಕಾರ್ಯಕ್ರಮಕ್ಕೆ ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದು.

3) ಕಾರ್ಯಕ್ರಮದ ಆಯೋಜಕರು ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ ಇದ್ದಲ್ಲಿ, ಅಬಕಾರಿ ಇಲಾಖೆಯ ಷರತ್ತುಗಳು ಹಾಗೂ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಹಾಗೂ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ ಚಾಲಕರ ಏರ್ಪಾಡು ಮಾಡಿ ಕಳುಹಿಸಿಕೊಡುವುದು ಅಥವಾ ಅಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದು.

4) ಹೊಸ ವರ್ಷದ ಆಚರಣೆಯನ್ನು ಮಧ್ಯ ರಾತ್ರಿ 12:00 ಗಂಟೆಗೆ ಆಚರಿಸಿದ ನಂತರ ರಾತ್ರಿ 01:00 ಗಂಟೆಯ ಒಳಗಾಗಿ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮಗಳನ್ನು ಮುಕ್ತಾಯ ಮಾಡುವುದು.

5) ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸೂಕ್ತ ಮತ್ತು ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಹಾಗೂ 200 ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿ ಟಿವಿ ಗಳನ್ನು ಅಳವಡಿಸುವುದು ಮತ್ತು ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ / ಅತಿಥಿಗಳ ಹೆಸರು ಮತ್ತು ವಿವರವನ್ನು ಬರೆದುಕೊಂಡು, ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳತಕ್ಕದ್ದು.

6) ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ ದ್ವಾರದಲ್ಲಿ ತಮ್ಮ ಸಿಬ್ಬಂಧಿಗಳನ್ನು ನೇಮಿಸಿಕೊಂಡು, ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾವಹಿಸುವುದು.

7) ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಿ, ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಎಚ್ಚರದಿಂದಿರುವುದು. ಯಾವುದೇ ಸಣ್ಣ ಪುಟ್ಟ ಘಟನೆಗಳು ಜರುಗಿದಾಗ,ಯಾವುದೇ ನಿರ್ಲಕ್ಷತನ ತೋರದೇ ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡುವುದು.

8) ಕಾರ್ಯಕ್ರಮದಲ್ಲಿ ಅಳವಡಿಸುವ ದ್ವನಿ ವರ್ದಕ, ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ / ತೊಂದರೆಯಾಗದ ರೀತಿ ನೋಡಿಕೊಳ್ಳುವುದು ಹಾಗೂ ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ ಈಜುಕೊಳ ( ಸ್ವಿಮ್ಮಿಂಗ್ ಫೂಲ್ ) ಇದ್ದಲ್ಲಿ, ಹೆಚ್ಚಿನ ಗಮನ ಹರಿಸುವುದು ಹಾಗೂ ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಿಕೊಂಡು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು. ಎನ್ನುವ ಮೇಲಿನ ಎಂಟು ಮಹತ್ವದ ಸೂಚನೆಗಳನ್ನು ನೀಡಿದರು.

ಸದರಿ ಸಭೆಯಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಎ.ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಎ ಉಪ ವಿಭಾಗ, ಸುರೇಶ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಬಿ ಉಪ ವಿಭಾಗ, ನಾಗರಾಜ್, ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, ಗಜಾನನ ವಾಮನ ಸುತರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!