ಪೊಲೀಸ್ ಇಲಾಖೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ವರ್ಗಾವಣೆ ಪರ್ವ ಶುರುವಾಗಿದ್ದು ಭರ್ಜರಿ ಸರ್ಜರಿ ಮಾಡಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಕೆಲವು ಅಧಿಕಾರಿಗಳಿಗೆ ಸ್ಥಳ ತೋರಿಸಿದರೆ ಪ್ರಭಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಅಲ್ಲೇ ಮುಂದುವರಿಸಿದ್ದಾರೆ ಹಾಗೆ ಕೆಲವು ಡಿವೈಎಸ್ಪಿ ಹಾಗೂ ಪಿಐಗಳನ್ನು ವರ್ಗಾವಣೆ ಮಾಡಿದ್ದು ಕೆಲವು ಪಿಎಸ್ಐ ಗಳಿಗೆ ಮುಂಬಡ್ತಿ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆ:
ಜಿಲ್ಲೆಯಲ್ಲಿ ಇಬ್ಬರು ಡಿವೈಎಸ್ಪಿಗಳು, ಇಬ್ಬರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಯಾದರೆ ಒಬ್ಬರಿಗೆ ಪಿಎಸ್ಐ ನಿಂದ ಪಿಐಗೆ ಬಡ್ತಿ ದೊರೆತಿದೆ.
ತೀರ್ಥಹಳ್ಳಿ :
ತೀರ್ಥಹಳ್ಳಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸದಾ ಸ್ಪಂದಿಸುತ್ತಿದ್ದ ಯುವ ಡಿವೈಎಸ್ಪಿ ಗಜಾನನ್ ವಾಮನ ಸುತಾರ್ ವರ್ಗಾವಣೆಯಾಗಿದ್ದಾರೆ. ಹಾಗೂ ಸಾಕಷ್ಟು ವಿವಾದಗಳ ನಡುವೆಯೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಇನ್ ಸ್ಪೆಕ್ಟರ್ ಅಶ್ವಥ್ ಗೌಡರ ತಡೆಹಿಡಿದ ವರ್ಗಾವಣೆ ಈಗ ಆಗಿದೆ. ಡಿವೈಎಸ್ಪಿ ಗಜಾನನ ವಾಮನ ಸುತಾರರನ್ನ ಬಾಗಲಕೋಟೆಗೆ ವರ್ಗಾಯಿಸಲಾಗಿದ್ದರೆ. ಇನ್ಸೆಕ್ಟರ್ ಅಶ್ವಥ್ ಗೌಡರನ್ನ ಬೆಂಗಳೂರಿನ ಐಜಿ ಕಚೇರಿಗೆ ವರ್ಗಾಯಿಸಲಾಗಿದೆ. ಇನ್ನು ತೀರ್ಥಹಳ್ಳಿಗೆ ಇನ್ ಸ್ಪೆಕ್ಟರ್ ಆಗಿ ಇಮ್ರಾನ್ ಬೇಗ್ ಎಂಬುವರು ವರ್ಗಾಯಿಸಲಾಗಿದೆ ಇಲ್ಲಿ ರಾಜಕೀಯ ಕೆಲಸ ಮಾಡಿದೆ.
ಶಿವಮೊಗ್ಗ:
ಸರಳ ವ್ಯಕ್ತಿತ್ವದ ಸ್ನೇಹಪರ ವ್ಯಕ್ತಿಯಾಗಿದ್ದ ಭಾವುಕ ಜೀವಿ ಶಿವಮೊಗ್ಗ ಬಿ ವಿಭಾಗದ ಡಿವೈಎಸ್ಪಿಯಾಗಿರುವ ಸುರೇಶ್ ರವರಿಗೆ ವರ್ಗಾವಣೆಯಾಗಿದೆ. ಇವರ ಜಾಗಕ್ಕೆ ರಾಜ್ಯ ಗುಪ್ತವಾರ್ತೆಯಲ್ಲಿದ್ದ ಸಂಜೀವ್ ಕುಮಾರ್ ತಿರ್ಲುಕ ಅವರು ವರ್ಗಾವಣೆಯಾಗಿದ್ದಾರೆ. ಇನ್ನು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ರಸಾದ್ ಅವರು ಇನ್ ಸ್ಪೆಕ್ಟರ್ ಆಗಿ ಬಡ್ತಿಪಡೆದಿದ್ದಾರೆ. ಲೋಕಾಯುಕ್ತದಲ್ಲಿ ಇನ್ ಸ್ಪೆಕ್ಟರ್ ಆಗಿ ಬಡ್ತಿಪಡೆದು ವರ್ಗಾವಣೆಯಾಗಿದ್ದಾರೆ.
ಸಾಗರ :
ಸ್ಥಳ ನಿರೀಕ್ಷೆಯಲ್ಲಿದ್ದ ಪುಲ್ಲಯ್ಯರವನ್ನ ಸಾಗರ ಪೊಲೀಸ್ ಠಾಣೆಯ ಸಿಪಿಐ ಆಗಿ ವರ್ಗಾಯಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಪಿಐ ಆಗಿ ಕರ್ತವ್ಯ ನಿರ್ವಹಿಸಿ ಚಿಕ್ಕಮಗಳೂರಿಗೆ ಕಳೆದ ಬಾರಿ ಗಣಪತಿ ಗಲಾಟೆ ವಿವಾದದಲ್ಲಿ ವರ್ಗಾವಣೆಯಾಗಿದ್ದ ಅಭಯ್ ಪ್ರಕಾಶ್ ಸೋಮನಾಳ್ ಚಿಕ್ಕಮಗಳೂರಿನ ಟೌನ್ ಠಾಣೆಯ ಪಿಐ ಆಗಿ ವರ್ಗವಾಗಿದ್ದಾರೆ. ಒಟ್ಟು 41 ಪಿಐಗಳು ಮತ್ತು 11 ಜನ ಡಿವೈಎಸ್ಪಿಗಳ ವರ್ಗಾವಣೆ ಮಾಡುವುದರ ಮೂಲಕ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದೆ.