Sunday, June 15, 2025
Google search engine
Homeಶಿವಮೊಗ್ಗಕೈ ತೋಟದ‌ ಮಹತ್ವ ಹಾಗೂ ಕುಂಡಲಿ ಮಿಶ್ರಣ ತಯಾರಿ..!

ಕೈ ತೋಟದ‌ ಮಹತ್ವ ಹಾಗೂ ಕುಂಡಲಿ ಮಿಶ್ರಣ ತಯಾರಿ..!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸುರಗಿ ಹಳ್ಳಿ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ದಡಿಯಲ್ಲಿ ಕೈತೋಟದ ಮಹತ್ವ ದ ಬಗ್ಗೆ ಗುಂಪು ಚರ್ಚೆ ಹಾಗೂ ಕುಂಡಲಿ ಮಿಶ್ರಣ ತಯಾರಿಕೆಯ ಪದ್ಧತಿ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಂಡಿದ್ದರು.ಕೈತೋಟದ ಬಗ್ಗೆ ಮಹತ್ವ:-ಸಾಮಾನ್ಯವಾಗಿ ಹಳ್ಳಿಮನೆಗಳ ಹಿತ್ತಲಿನಲ್ಲಿ ಸ್ವಲ್ಪ ಜಾಗವನ್ನು ಬಿಟ್ಟಿಕೊಂಡಿರುತ್ತಾರೆ.

ಈ ಜಾಗದಲ್ಲಿ ಮನೆಗೆ ಬೇಕಾಗಿರುವ ತರಕಾರಿಗಳಾದ ಟೊಮ್ಯಾಟೊ, ಮೆಣಸಿನಕಾಯಿ, ಬದನೆಕಾಯಿ, ಕರಿಬೇವು, ಸೊಪ್ಪುಗಳಾದ ಕೊತ್ತಂಬರಿ, ಪಾಲಕ್, ಪುದಿನಾ, ಮೆಂತ್ಯ ,ದಂಟು ಸೊಪ್ಪು,ಹೂವಿನ ಗಿಡಗಳಾದ ಚೆಂಡು, ಸೇವಂತಿಗೆ,ಕನಕಾಂಬರ, ಮಲ್ಲಿಗೆ,ಗುಲಾಬಿ ಹಾಗೂ ಹಣ್ಣುಗಳಾದ ಪೇರಲೆ,ಪಪಾಯ ಗಿಡಗಳನ್ನು ಹಾಕಿಕೊಳ್ಳಬಹುದು. ಹೀಗೆ ಕೈತೋಟ ಮಾಡಿಕೊಳ್ಳುವುದರಿಂದ ತರಕಾರಿಯ ಖರ್ಚು ಕಡಿಮೆ ಮಾಡಿಕೊಳ್ಳಬಹುದಲ್ಲದೆ ರಾಸಾಯನಿಕ ಮುಕ್ತ ತರಕಾರಿಗಳನ್ನು ಸೇವಿಸಬಹುದು. ಹಾಗಾಗಿ ಪ್ರತಿಯೊಂದು ಮನೆಯಲ್ಲಿ ಕೈತೋಟ ಮಾಡಿಕೊಳ್ಳುವುದು ಅವಶ್ಯಕವಾಗಿದೆ.ಕುಂಡಲಿ ಮಿಶ್ರಣ ತಯಾರಿಕೆ-ಪದ್ಧತಿ ಪ್ರಾತ್ಯಕ್ಷಿಕೆ:-ಪ್ರತಿಯೊಬ್ಬರು ತಮ್ಮ ಮನೆಯು ಚೆಂದವಾಗಿ ಕಾಣಬೇಕೆಂದು ಮನೆಯ ಮುಂದೆ ಗಿಡಗಳನ್ನು ಕುಂಡಲಿಗಳಲ್ಲಿ ಹಾಕಿಕೊಂಡಿರುತ್ತಾರೆ.

ಕುಂಡಲಿಗೆ ಬರೀ ಮಣ್ಣನ್ನು ಹಾಕಿದರೆ ಗಿಡಗಳು ಚೆನ್ನಾಗಿ ಬೆಳೆಯುವುದಿಲ್ಲ. ಹಾಗಾಗಿ ಮಣ್ಣು,ಮರಳು, ಗೊಬ್ಬರ ಹಾಗೂ ತೆಂಗಿನ ನಾರಿನ (ಕೋ ಕೋ ಪೀಟ್) ಸಮಮಿಶ್ರಣ ತಯಾರಿಸಿಕೊಂಡು ಕುಂಡಲಿಗೆ ಹಾಕಬೇಕು, ನಂತರ ಗಿಡವನ್ನು ನೆಡಬೇಕು. ಹೀಗೆ ಮಾಡಿದರೆ ಗಿಡದ ಬೇರಿಗೆ ಬೇಕಾದ ನೀರು ಗಾಳಿ ಹಾಗೂ ಪೋಷಕಾಂಶಗಳು ದೊರೆಯುತ್ತದೆ ಹಾಗೆಯೇ ಗಿಡವು ಚೆನ್ನಾಗಿ ಬೆಳೆಯುತ್ತದೆ, ಎಂದು ವಿದ್ಯಾರ್ಥಿಗಳು ಪದ್ಧತಿ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟರು.

ರಘುರಾಜ್ ಹೆಚ್‌ ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!