Wednesday, April 30, 2025
Google search engine
Homeರಾಜ್ಯಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್..! 'ಮೇ' ಗೆ ಎಲೆಕ್ಷನ್ 'ಇವಿಎಂ'...

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್..! ‘ಮೇ’ ಗೆ ಎಲೆಕ್ಷನ್ ‘ಇವಿಎಂ’ ಯಂತ್ರಕ್ಕೆ ಫುಲ್ ಸ್ಟಾಪ್ ಸಾಧ್ಯತೆ..?!

ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆಗಳಿಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು ಇದೇ ವರ್ಷದ ಮೇ ತಿಂಗಳಿನಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಸುವ ಸಾಧ್ಯತೆಯಿದೆ.

ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ‌ಚುನಾವಣೆ ನಡೆಸಲು ಚರ್ಚೆ ನಡೆಯುತ್ತಿದೆ ಎಂದು ರಾಜ್ಯ‌ ಚುನಾವಣಾ ಆಯೋಗದ ಆಯುಕ್ತ ‌ಜಿ.ಎಸ್ ಸಂಗ್ರೇಶಿ ತಿಳಿಸಿದ್ದಾರೆ.


ಬೆಳಗಾವಿಯಲ್ಲಿ ಈ ಸಂಬಂಧವಾಗಿ ಮಾತನಾಡಿದ ಸಂಗ್ರೇಶಿ, ಚುನಾವಣೆ ವಿಳಂಬವಾಗಲು ಕಾರಣವನ್ನು ತಿಳಿಸುತ್ತಾ ಜಿಲ್ಲಾ ಪುನರ್ ವಿಂಗಡಣಾ ವರದಿ ಪಡೆಯುವುದು ಸೇರಿದಂತೆ ವಿವಿಧ ಕಾರಣಕ್ಕಾಗಿ ಚುನಾವಣೆ ಸ್ವಲ್ಪ ಸಮಯ ವಿಳಂಬವಾಗಿದೆ ಆದರೆ ಹಾಗಾಗಿ ಏಪ್ರಿಲ್ ತಿಂಗಳಲ್ಲಿ ಚುನಾವಣೆ ಘೋಷಣೆ ಮಾಡಿ ಮೇ ತಿಂಗಳಲ್ಲಿ ಚುನಾವಣೆ ನಡೆಸುವುದು ಬಹುತೇಕ ಖಚಿತ ಎಂದಿದ್ದಾರೆ.

ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಮೀಸಲಾತಿ ಪಟ್ಟಿ ನೀಡಲು ಸೂಚಿಸಲಾಗಿದ್ದು. ಆ ಮೀಸಲಾತಿ ಪಟ್ಟಿ ಸಿಕ್ಕ ತಕ್ಷಣ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣಾ ವೇಳಾ ಪಟ್ಟಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಸಿದ್ಧಪಡಿಸಲು ಸಕಲಸಿದ್ಧತೆ :

18 ವರ್ಷ ತುಂಬಿದ ಎಲ್ಲಾ ಯುವಕ, ಯುವತಿರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಲು ಸಿದ್ಧತೆ ನಡೆದಿದ್ದು ಈಗಾಗಲೇ ಸಂಬಂಧಪಟ್ಟವರಿಗೆ ಇದರ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

ಇವಿಎಂ ಯಂತ್ರದ ಬದಲು ಬ್ಯಾಲೆಟ್ ಪೇಪರ್ ಬಳಕೆ ಸಾಧ್ಯತೆ :

ಇವಿಎಂ ಯಂತ್ರದ ಮೇಲೆ ವಿವಿಧ ರಾಜಕೀಯ ಪಕ್ಷಗಳು ಸೇರಿದಂತೆ ಮತದಾರರಿಗೂ ಕೂಡ ಅನುಮಾನವಿದೆ ಹಾಗಾಗಿ ಇವಿಎಂ ಹ್ಯಾಕ್ ಬಗ್ಗೆ ಪ್ರಾತ್ಯಕ್ಷಿಕವಾಗಿ ಪರೀಕ್ಷೆ ನಡೆಸಬೇಕು ಸಾರ್ವಜನಿಕರಲ್ಲಿ ಹಾಗೂ ರಾಜಕಾರಣಿಗಳಲ್ಲಿ ಇರುವ ಸಂಶಯ ನಿವಾರಿಸಬೇಕು. ಈ ಬಾರಿ ಜನರಲ್ಲಿನ ಸಂಶಯ ನಿವಾರಿಸಲು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಯಾತಿ ಚುನವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...