Wednesday, April 30, 2025
Google search engine
Homeಶಿವಮೊಗ್ಗಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ..!

ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ..!

ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ

ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಜನವರಿ 14/2025 ರಂದು ಸಂಕ್ರಾಂತಿ ಹಬ್ಬವನ್ನು ಈ ವರ್ಷ ಪರಿಸರ ಸುರಕ್ಷತೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ಲಾಸ್ಟಿಕ್ ಮುಕ್ತ ಹಬ್ಬವಾಗಿ ಹಮ್ಮಿಕೊಳ್ಳಲಾಗಿದೆ.

ಪ್ರತಿವರ್ಷವೂ ಜನರು ಸಂತೋಷ ಮತ್ತು ಹರ್ಷದಿಂದ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು ಸಂಕ್ರಾಂತಿ. ಭಾರತೀಯ ಸಂಪ್ರದಾಯಗಳಲ್ಲಿ ಮಹತ್ವದ ಹಬ್ಬವಾಗಿರುವ ಈ ದಿನವು ಹೊಸ ಕೃಷಿ ಚಕ್ರದ ಆರಂಭವನ್ನು ಸೂಚಿಸುತ್ತದೆ. ಭಾರತೀಯ ಕ್ಯಾಲೆಂಡರ್ ನಂತೆ, ಸಂಕ್ರಾಂತಿ ಪ್ರತಿ ವರ್ಷ ಆಗಿ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಸಮಯದಲ್ಲಿ ನಡೆಯುತ್ತದೆ.

ಹಬ್ಬದ ಧಾರ್ಮಿಕ ಮತ್ತು ಕೃಷಿಕ ಮಹತ್ವ
ಸಂಕ್ರಾಂತಿ ಹಬ್ಬವು ಧಾರ್ಮಿಕವಾಗಿ ಕೂಡ ಮಹತ್ವವನ್ನು ಹೊಂದಿದೆ.ಈ ಹಬ್ಬದಂದು ರೈತರೂ ತಾವು ಕೊಯ್ಲು ಮಾಡಿರುವ ಧಾನ್ಯಗಳಿಂದ ಪೊಂಗಲ್ ಎಂಬ ಖಾದ್ಯವನ್ನು ತಯಾರಿಸಿ ಸೇವಿಸುತ್ತಾರೆ. ಈ ಹಬ್ಬವನ್ನು ಭಾರತದಲ್ಲಿ ವಿವಿಧ ಹೆಸರುಗಳಿಂದ ಕರೆಯುತ್ತಾರೆ
ತಮಿಳುನಾಡಿನಲ್ಲಿ ಪೊಂಗಲ್,ಕರ್ನಾಟಕ ಆಂಧ್ರಪ್ರದೇಶ ದಲ್ಲಿ ಮಕರ ಸಂಕ್ರಾಂತಿ,ಗುಜರಾತಿನಲ್ಲಿ ಉತ್ತರಾಯಣ, ಪಂಜಾಬಿನಲ್ಲಿ ಲೊಹ್ರಿ ಎಂದು ಕರೆಯುತ್ತಾರೆ

ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ತಾವೇ ವಿಶೇಷವಾದ ಪೇಪರ್ ಕಪ್ಪುಗಳ ಬ್ಯಾಗನ್ನು ತಯಾರಿಸಿ ಅದರಲ್ಲಿ ಎಳ್ಳು-ಬೆಲ್ಲ ವನ್ನು ಹಾಕಿ ಹಂಚಿ, ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...