Home ಶಿವಮೊಗ್ಗಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ..!

ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ..!

by EDITOR NEWS WARRIORS
0 comments

ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ

ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಜನವರಿ 14/2025 ರಂದು ಸಂಕ್ರಾಂತಿ ಹಬ್ಬವನ್ನು ಈ ವರ್ಷ ಪರಿಸರ ಸುರಕ್ಷತೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ಲಾಸ್ಟಿಕ್ ಮುಕ್ತ ಹಬ್ಬವಾಗಿ ಹಮ್ಮಿಕೊಳ್ಳಲಾಗಿದೆ.

ಪ್ರತಿವರ್ಷವೂ ಜನರು ಸಂತೋಷ ಮತ್ತು ಹರ್ಷದಿಂದ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು ಸಂಕ್ರಾಂತಿ. ಭಾರತೀಯ ಸಂಪ್ರದಾಯಗಳಲ್ಲಿ ಮಹತ್ವದ ಹಬ್ಬವಾಗಿರುವ ಈ ದಿನವು ಹೊಸ ಕೃಷಿ ಚಕ್ರದ ಆರಂಭವನ್ನು ಸೂಚಿಸುತ್ತದೆ. ಭಾರತೀಯ ಕ್ಯಾಲೆಂಡರ್ ನಂತೆ, ಸಂಕ್ರಾಂತಿ ಪ್ರತಿ ವರ್ಷ ಆಗಿ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಸಮಯದಲ್ಲಿ ನಡೆಯುತ್ತದೆ.

ಹಬ್ಬದ ಧಾರ್ಮಿಕ ಮತ್ತು ಕೃಷಿಕ ಮಹತ್ವ
ಸಂಕ್ರಾಂತಿ ಹಬ್ಬವು ಧಾರ್ಮಿಕವಾಗಿ ಕೂಡ ಮಹತ್ವವನ್ನು ಹೊಂದಿದೆ.ಈ ಹಬ್ಬದಂದು ರೈತರೂ ತಾವು ಕೊಯ್ಲು ಮಾಡಿರುವ ಧಾನ್ಯಗಳಿಂದ ಪೊಂಗಲ್ ಎಂಬ ಖಾದ್ಯವನ್ನು ತಯಾರಿಸಿ ಸೇವಿಸುತ್ತಾರೆ. ಈ ಹಬ್ಬವನ್ನು ಭಾರತದಲ್ಲಿ ವಿವಿಧ ಹೆಸರುಗಳಿಂದ ಕರೆಯುತ್ತಾರೆ
ತಮಿಳುನಾಡಿನಲ್ಲಿ ಪೊಂಗಲ್,ಕರ್ನಾಟಕ ಆಂಧ್ರಪ್ರದೇಶ ದಲ್ಲಿ ಮಕರ ಸಂಕ್ರಾಂತಿ,ಗುಜರಾತಿನಲ್ಲಿ ಉತ್ತರಾಯಣ, ಪಂಜಾಬಿನಲ್ಲಿ ಲೊಹ್ರಿ ಎಂದು ಕರೆಯುತ್ತಾರೆ

ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ತಾವೇ ವಿಶೇಷವಾದ ಪೇಪರ್ ಕಪ್ಪುಗಳ ಬ್ಯಾಗನ್ನು ತಯಾರಿಸಿ ಅದರಲ್ಲಿ ಎಳ್ಳು-ಬೆಲ್ಲ ವನ್ನು ಹಾಕಿ ಹಂಚಿ, ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...