Wednesday, April 30, 2025
Google search engine
Homeಶಿವಮೊಗ್ಗಭತ್ತ ಬೆಳೆಯುವ ವಿಧಾನಗಳು..!

ಭತ್ತ ಬೆಳೆಯುವ ವಿಧಾನಗಳು..!

ಭತ್ತ ಬೆಳೆಯುವ ವಿಧಾನಗಳು

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಭತ್ತ ಬೆಳೆಯುವ ವಿಧಾನಗಳು’ ಕುರಿತು ಗುಂಪು ಚರ್ಚೆ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಯನ್ನು ಆಯೋಜಿಸಿದ್ದರು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಡಿ. ಎಸ್. ಆರ್ (ಡೈರೆಕ್ಟ್ ಸೀಡೆಡ್ ರೈಸ್), ಎಸ್. ಆರ್. ಐ (ಸಿಸ್ಟಮ್ ಆಫ್ ರೈಸ್ ಇಂಟೆನ್ಸಿಫಿಕೇಷನ್) ಮತ್ತು ಕೆಸರಿನಲ್ಲಿ ಭತ್ತ ನಾಟಿ ಮಾಡುವ ವಿಧಾನಗಳ ನಡುವಿನ ವ್ಯತ್ಯಾಸ, ಅನುಕೂಲ, ಅನಾನುಕೂಲಗಳ ಕುರಿತು ರೈತರೊಂದಿಗೆ ಗುಂಪು ಚರ್ಚೆ ನಡೆಸಿದರು. ನಂತರ ವಿದ್ಯಾರ್ಥಿಗಳು ತಮ್ಮ ಬೆಳೆ ಸಂಗ್ರಹಾಲಯದಲ್ಲಿ ತಾವೇ ಈ ಮೂರು ವಿಧಾನಗಳಲ್ಲಿ ಬೆಳೆದಿದ್ದ ಭತ್ತವನ್ನು ರೈತರಿಗೆ ತೋರಿಸಿ, ಬೆಳೆಯುವ ವಿಧಾನವನ್ನು ವಿವರಿಸಿ ಪದ್ಧತಿ ಪ್ರಾತ್ಯಕ್ಷಿಕೆ ಮಾಡಿದರು. 1.ಡಿ.ಎಸ್.ಆರ್ ವಿಧಾನ:ಇದರಲ್ಲಿ ಭತ್ತದ ಬೀಜಗಳನ್ನು ನೇರವಾಗಿ ಗದ್ದೆಗೆ ಹಾಕುತ್ತಾರೆ. ಈ ರೀತಿ ಬೆಳೆಯುವುದರಿಂದ ಕೂಲಿಯ ವೆಚ್ಚ ಕಡಿಮೆ ಮಾಡಬಹುದು ಹಾಗೂ ಭತ್ತವು ಬೇಗ ಕಟಾವಿಗೆ ಬರುತ್ತದೆ. ಆದರೆ ಇದರಲ್ಲಿ ಕಳೆಗಳ ನಿರ್ವಹಣೆ ಕಷ್ಟಕರವಾಗಿರುತ್ತದೆ. 2.ಎಸ್.ಆರ್.ಐ (ಸಿಸ್ಟಂ ಆಫ್ ರೈಸ್ ಇಂಟೆನ್ಸಿಫಿಕೇಶನ್) ವಿಧಾನ:ಈ ಬಗೆಯಲ್ಲಿ 8-14 ದಿನಗಳ ಭತ್ತದ ಸಸಿಗಳನ್ನು (ಏರು ಮಡಿಯಲ್ಲಿ) 25*25 ಸಮ ಅಂತರದಲ್ಲಿ ಗದ್ದೆಗೆ ನಾಟಿ ಮಾಡುತ್ತಾರೆ.

ಈ ವಿಧಾನದಲ್ಲಿ ಸಾಮಾನ್ಯವಾಗಿ ಭತ್ತ ಬೆಳೆಯಲು ಬೇಕಿರುವ ನೀರಿಗಿಂತ 15 ರಿಂದ 20% ನೀರನ್ನು ಉಳಿಸುವುದರ ಜೊತೆಗೆ ಅಕ್ಕಿಯ ಉತ್ಪಾದಕತೆಯನ್ನು ಸುಧಾರಿಸುತ್ತದೆ.3.ಕೆಸರಿನಲ್ಲಿ ನಾಟಿ ಮಾಡುವ ವಿಧಾನ:ಇದರಲ್ಲಿ ಭತ್ತವನ್ನು 21 ದಿನಗಳ ಕಾಲ ಏರು ಮಡಿ ಮಾಡಿ ಭತ್ತದ ಸಸಿಗಳನ್ನು ಬೆಳೆಸಿಕೊಳ್ಳುತ್ತಾರೆ. ನಂತರ ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಾರೆ.ಸಿಸ್ಟಂ ಆಫ್ ರೈಸ್ ಇಂಟೆನ್ಸಿಫಿಕೇಶನ್ (ಎಸ್.ಆರ್.ಐ) ಭತ್ತದ ಗಿಡಗಳು ಮಣ್ಣಿನ ನೀರು ಮತ್ತು ಪೋಷಕಾಂಶಗಳನ್ನು ಸಮಥ೯ಕವಾಗಿ ಬಳಸಿಕೊಳ್ಳುತ್ತವೆ ಮತ್ತು ವಿಶೇಷವಾಗಿ ಹೆಚ್ಚು ಬೇರುಗಳ ಬೆಳವಣಿಗೆ ಉಂಟುಮಾಡುವ ಮೂಲಕ ನೀರಾವರಿ ಅಕ್ಕಿಯ ಉತ್ಪಾದಕತೆಯನ್ನು ಹೆಚ್ಚಿಸುವ ಒಂದು ವಿಧಾನವಾಗಿದೆ. ಹಾಗಾಗಿ ರೈತರು ಈ ವಿಧಾನವನ್ನು ಅಳವಡಿಸಿಕೊಳ್ಳಬೇಕೆಂದು ಉತ್ತೇಜಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...