Wednesday, April 30, 2025
Google search engine
Homeಶಿವಮೊಗ್ಗShivamogga:ಎಟಿಎಂ ಕಳ್ಳತನ..!ಅಸಲಿಗೆ ನಡೆದಿದ್ದೇನು..?!

Shivamogga:ಎಟಿಎಂ ಕಳ್ಳತನ..!ಅಸಲಿಗೆ ನಡೆದಿದ್ದೇನು..?!

ಶಿವಮೊಗ್ಗ: ರಾಜ್ಯದ್ಯಂತ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಎಟಿಎಂ ಗಳಲ್ಲಿ ದರೋಡೆ ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು ಈಗಲೂ ಕೂಡ ಹಲವು ಪ್ರಕರಣಗಳಲ್ಲಿ ಆರೋಪಿಗಳು ಪತ್ತೆಯಾಗಿಲ್ಲ.

ನಿನ್ನೆ ತಡರಾತ್ರಿ ಸುಮಾರು ಹತ್ತರಿಂದ ಹನ್ನೊಂದು ಗಂಟೆ ಸುಮಾರಿಗೆ ನಗರದ ನೆಹರು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ನ ಎಟಿಎಂ ಗೆ ಒಬ್ಬ ವ್ಯಕ್ತಿ ಬಂದು ಕಳ್ಳತನ ಮಾಡಲು ಪ್ರಯತ್ನ ಮಾಡಿ ಎಟಿಎಂ ನ ಸೈರನ್ ಹೊಡೆದುಕೊಂಡ ನಂತರ ಆತ ಓಡಿ ಹೋಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಪೊಲೀಸ್ ಇಲಾಖೆ ಕೂಡ ಆತನನ್ನು ತೀವ್ರ ಹುಡುಕಾಟ ನಡೆಸಿ ಕೊನೆಗೂ ಬಂಧಿಸಿದ್ದಾರೆ ಎನ್ನುವ ಮಾಹಿತಿ ಇದೆ.

ಅಸಲಿಗೆ ನಡೆದಿದ್ದೇನು..?!

ಶಿವಮೊಗ್ಗದ ಸ್ಮಾರ್ಟ್ ಸಿಟಿ ಕಾರ್ಯನಿರ್ವಹಿಸಲು ಬಂದ ಬಿಹಾರ ಮೂಲದ ವ್ಯಕ್ತಿ ರಾತ್ರಿ ಕುಡಿದ ಅಮಲಿನಲ್ಲಿ ಹಣ ಬಿಡಿಸಲು ಎಟಿಎಂಗೆ ತೆರಳಿದ್ದಾನೆ ಆಗ ಹಣ ಬರದೇ ಇದ್ದಾಗ ಎಟಿಎಂ ನನ್ನು ಓಪನ್ ಮಾಡಲು ಪ್ರಯತ್ನಿಸಿದ್ದಾನೆ ಆ ಪ್ರಯತ್ನದಲ್ಲಿದ್ದಾಗ ಎಟಿಎಂನ ಸೈರನ್ ಹೊಡೆದುಕೊಂಡಿದೆ ಆಗ ಆತ ಅಲ್ಲಿಂದ ಹೊರಟು ಹೋಗಿದ್ದಾನೆ.

ಈತನ ಬೆನ್ನು ಹತ್ತಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಕೊನೆಗೂ ಆತ ಸಿಕ್ಕಿಬಿದ್ದಿದ್ದಾನೆ.

ಈತ ನಿಜವಾಗಲೂ ಹಣ ಬಿಡಿಸಲು ಹೋಗಿ ಕುಡಿದ ಮತ್ತಿನಲ್ಲಿ ಬ್ಯಾಂಕ್ ನ ಎಟಿಎಂ ಕೀಳಲು ಪ್ರಯತ್ನ ನಡೆಸಿದನಾ..?! ಅಥವಾ ಇದು ಮೊದಲ ಪ್ರಯತ್ನ ಮಾಡಿ ಮುಂದೆ ದೊಡ್ಡ ಯತ್ನಕ್ಕೆ ಕೈಹಾಕಲು ಪ್ರಯತ್ನಪಟ್ಟಿರಬಹುದಾ..?! ಬಿಹಾರ ಮೂಲದ ವ್ಯಕ್ತಿಯಾಗಿರುವುದರಿಂದ ಅನುಮಾನಗಳು ಹೆಚ್ಚಾಗಿವೆ ಪೊಲೀಸರ ತನಿಖೆಯಿಂದ ಎಲ್ಲವೂ ಹೊರಬರಬೇಕಾಗಿದೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...