Wednesday, April 30, 2025
Google search engine
Homeಶಿವಮೊಗ್ಗಸಾಗರದಲ್ಲಿ ಗಾಂಜಾ ವಶಪಡಿಸಿಕೊಂಡ ಅಬಕಾರಿ ಇಲಾಖೆ ಗಾಂಜಾ ಹಾಗೂ ಅಕ್ರಮ ಮದ್ಯ ಮಾರಾಟಗಾರರಿಗೆ...

ಸಾಗರದಲ್ಲಿ ಗಾಂಜಾ ವಶಪಡಿಸಿಕೊಂಡ ಅಬಕಾರಿ ಇಲಾಖೆ ಗಾಂಜಾ ಹಾಗೂ ಅಕ್ರಮ ಮದ್ಯ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ ಕ್ಯಾಪ್ಟನ್ ಅಜಿತ್ ಕುಮಾರ್..!

ಶಿವಮೊಗ್ಗ> ಸಪ್ಟೆಂಬರ್> 20> ರಂದು ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ರವರ ಆದೇಶದಂತೆ ಹಾಗೂ ಸಾಗರ ಉಪ ವಿಭಾಗದ ಉಪ ಅಧೀಕ್ಷಕರು ಮಾರ್ಗದರ್ಶನ ದಲ್ಲಿ ಸಾಗರ ವಲಯ ಅಬಕಾರಿ ನಿರೀಕ್ಷಕರಾದ ಸಂದೀಪ್ ಎಲ್. ಸಿ ರವರ ನಿರ್ದೇಶನದಲ್ಲಿ ಉಪ ನಿರೀಕ್ಷಕರಾದ ಶ್ರೀ ಸಂತೋಷ್ ರಡ್ಡೆರ್ ಅಬಕಾರಿ ಪೇದೆಗಳಾದ ಮಹಾಬಲೇಶ್, ಕನಯ, ಅರುಣ್ ದೀಪಕ್ ಹಾಗೂ ಮುದಾಸಿರ್ ಜೊತೆ ಸೇರಿ ಅಬಕಾರಿ ದಾಳಿ ನಡೆಸಲಾಯಿತು.

ಸಾಗರ ತಾಲ್ಲೂಕು ವ್ಯಾಪ್ತಿಯ ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಬಿನ್ ಕರಿಯಪ್ಪ ಇವರಿಗೆ ಸೇರಿದ ವಾಸದ ಮನೆಯ ಮೊದಲನೆ ಕೊಠಡಿಯಲ್ಲಿ ಅಕ್ರಮವಾಗಿ ಸುಮಾರು 330 ಗ್ರಾಂ ಹಸಿ ಗಾಂಜಾವನ್ನು ಪತ್ತೆಹಚ್ಚಿ ಸದರಿ ಕೃತ್ಯವು ಎನ್.ಡಿ .ಪಿ. ಎಸ್ ಕಾಯ್ದೆ 1985 ರ ಕಲಂ 8(ಸಿ) ರೀತ್ಯಾ ಉಲ್ಲಂಘನೆ ಹಾಗೂ ಇದೇ ಕಾಯ್ದೆಯ ಕಲಂ 20(b) 20 (ii) (A),25 ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುವ ಕಾರಣ ಮೊಕದ್ದಮೆಯನ್ನು ದಾಖಲಿಸಲಾಯಿತು.

ಮುದ್ದೆಮಾಲನ್ನು ನಿಯಾಮಾನುಸಾರ ಜಪ್ತು ಪಡಿಸಿಕೊಂಡು, ಆರೋಪಿಯ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.

ಗಾಂಜಾ ಹಾಗೂ ಅಕ್ರಮ ಮದ್ಯ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ ಕ್ಯಾಪ್ಟನ್ ಅಜಿತ್ ಕುಮಾರ್:

ಪತ್ರಿಕೆ ಜೊತೆ ಮಾತನಾಡಿದ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜಿತ್ ಕುಮಾರ್ ಶಿವಮೊಗ್ಗ ಇವರು ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಎನ್ನುವುದು ನಮ್ಮ ಗಮನದಲ್ಲಿದೆ ಅಕ್ರಮ ಮದ್ಯ ಮಾರಾಟಗಾರರೇ ಎಚ್ಚರದಿಂದಿರಿ ಇದು ನಿಮಗೆ ಕೊನೆಯ ಎಚ್ಚರಿಕೆ ಈಗಾಗಲೇ ಅಕ್ರಮ ಮದ್ಯ ಮಾರಾಟ ಮಾಡುವ ಕಡೆಗೆಲ್ಲ ದಾಳಿ ಮಾಡಿ ಮದ್ಯ ವಶಪಡಿಸಿ ಕೊಳ್ಳಲಾಗುತ್ತಿದೆ. ಹಾಗೆ ಕೇಸ್ ಕೂಡ ಹಾಕಲಾಗುತ್ತಿದೆ.

ಇದನ್ನು ಇಲ್ಲಿಗೆ ನಿಲ್ಲಿಸಿದರೆ ಒಳ್ಳೆಯದು ಮುಂದಿನ ದಿನಗಳಲ್ಲಿ ಇಲಾಖೆ ಸುಮ್ಮನಿರುವುದಿಲ್ಲ ಇಂತಹ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ಸಮರ ಸಾರಿರುವ ಇಲಾಖೆ ಇಂಥವರನ್ನು ಬಂದಿಸಿ ಜೈಲಿಗೆ ಕಳುಹಿಸುವುದರಲ್ಲಿ ಯಾವುದೇ ಸಂಶಯವಿಲ್ಲ.

ಸಾರ್ವಜನಿಕರು ನೇರವಾಗಿ ಅಬಕಾರಿಇಲಾಖೆಗೆ ಮಾಹಿತಿ ನೀಡಿ:

ಸಾರ್ವಜನಿಕರಿಗೆ ಕ್ಯಾಪ್ಟನ್ ಅಜಿತ್ ಕುಮಾರ್ ಅವರು ಮನವಿ ಮಾಡಿದ್ದು ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಸಮರ ಸಾರಿದ್ದು ಅವರನ್ನು ಬಂಧಿಸಲು ಸರ್ವಸನ್ನದ್ಧವಾಗಿದೆ. ಯಾವುದೇ ಅಕ್ರಮ ಮದ್ಯ ಮಾರಾಟಗಾರರು ಸಾರ್ವಜನಿಕರ ಗಮನಕ್ಕೆ ಬಂದರೆ ನೇರವಾಗಿ ನಮ್ಮ ಅಬಕಾರಿ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ…

ವರದಿ ..ರಘುರಾಜ್ ಹೆಚ್.. ಕೆ

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...