Sunday, June 15, 2025
Google search engine
Homeಶಿವಮೊಗ್ಗಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯದ...

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯದ ವತಿಯಿಂದ ತಾಲೂಕು ಮಟ್ಟದ ಕೃಷಿ ಮೇಳ..!

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ೨೦೨೪-೨೫” ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಲು ಮಧು ಬಂಗಾರಪ್ಪ, ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆಗಮಿಸಲಿದ್ದಾರೆ. ಬೆಳೆ ಸಂಗ್ರಹಾಲಯದ ಉದ್ಘಾಟಕರಾಗಿ ಸಂಸದರಾದ ಬಿ.ವೈ. ರಾಘವೇಂದ್ರರವರು ನೆರವೇರಿಸಲಿದ್ದಾರೆ,

ವಸ್ತು ಪ್ರದರ್ಶನದ ಉದ್ಘಾಟನೆಯನ್ನು ವಿಧಾನಸಭಾ ಸದಸ್ಯರಾದ ಬಿ.ವೈ. ವಿಜಯೇಂದ್ರ ರವರು ಮಾಡಲಿದ್ದಾರೆ ಹಾಗೂ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಗದೀಶ್ ರವರು ಮತ್ತು ವಿವಿಧ ಕೃಷಿ ಮತ್ತು ಅಭಿವೃದ್ಧಿ ಇಲಾಖೆಗಳಿಂದ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಈ ಕೃಷಿ ಮತ್ತು ಕಲೆಗಳ ಉತ್ಸವದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಹಾಗೂ ವಿಭಿನ್ನ ಕೃಷಿ ಮಳಿಗೆಗಳನ್ನು ಹಾಕುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಇದರಲ್ಲಿ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಜೇನು ಸಾಕಾಣಿಕೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಕೃಷಿ ಪರಿಕರಗಳು ಮತ್ತು ಯಂತ್ರೋಪಕರಣಗಳ ಮತ್ತು ಇನ್ನಿತರ ಪ್ರದರ್ಶನ ಏರ್ಪಡಿಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಮಳಿಗೆಗಳು ಇರುತ್ತದೆ.ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರೈತರ ಜೊತೆ ಚರ್ಚಾಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ.ಎಲ್ಲಾ ರೈತ ಬಾಂಧವರು ತಮ್ಮ ಕುಟುಂಬದ ಸಮೇತ ಈ ಕಾರ್ಯಕ್ರಮಕ್ಕೆ ಆಗಮಿಸಿ ಉಪಯುಕ್ತ ಮಾಹಿತಿ ಪಡೆಯುವುದರ ಮೂಲಕ ಕೃಷಿ ಮೇಳವನ್ನು ಯಶಸ್ವಿಗೊಳಿಸಬೇಕಾಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!