Wednesday, April 30, 2025
Google search engine
Homeಶಿವಮೊಗ್ಗರಾಷ್ಟ್ರಮಟ್ಟದಲ್ಲಿ ವಿಜೇತರಾಗಿ ರಾಜ್ಯಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿತಂದ ಗೋಪಾಳದ ಪೊದಾರ್ ಶಾಲೆಯ ವಿದ್ಯಾರ್ಥಿಗಳು..!

ರಾಷ್ಟ್ರಮಟ್ಟದಲ್ಲಿ ವಿಜೇತರಾಗಿ ರಾಜ್ಯಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿತಂದ ಗೋಪಾಳದ ಪೊದಾರ್ ಶಾಲೆಯ ವಿದ್ಯಾರ್ಥಿಗಳು..!

ರಾಷ್ಟ್ರಮಟ್ಟದಲ್ಲಿವಿಜೇತರಾಗಿ ರಾಜ್ಯಕ್ಕೆಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿತಂದ ಗೋಪಾಳದ ಪೊದಾರ್ ಶಾಲೆಯ ವಿದ್ಯಾರ್ಥಿಗಳು CBSE ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ಅಂತಿಮ ಹಂತದ ಸ್ಪರ್ಧೆಯು ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್,ಗುರುಗ್ರಾವ್, ಹರಿಯಾಣದಲ್ಲಿಆಯೋಜಿಸಲಾಗಿತ್ತು.

ಜನವರಿ 30 ರಿಂದ ಫೆಬ್ರವರಿ 01 ರವರೆಗೆ ಆಯೋಜಿಸಲಾಗಿದ್ದ ಈ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ರಾಷ್ಟ್ರದಾದ್ಯಂತ ಒಟ್ಟು429 ಶಾಲೆಗಳು ವಿವಿಧ ಮಾದರಿಗಳ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಹಾಗೆಯೇ ಗೋಪಾಳದ ಪೊದಾರ್ ಇಂಟರ್ನ್ಯಾಷನಲ್ ಸ್ಕೂಲ್ ವತಿಯಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಅದ್ವಿತೀಯ ಬ್ಲಾಕ್ ಸೋಲ್ಜರ್ ಫ್ಲೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ್ ರೆಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ. ಇಂತಹ ಅಮೋಘ ಸಾಧನೆಯ ಬೆನ್ನೆಲುಬಾಗಿ ನಿಂತು ಮಕ್ಕಳಿಗೆ ಮಾರ್ಗದರ್ಶನ ಮಾಡಿದ ಶ್ರೀಮತಿ ಶ್ವೇತಾ ಎಂ.ಎಸ್ ರವರಿಗೆ ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಶುಭಕೋರಿದ್ದಾರೆ.

ವಿದ್ಯಾರ್ಥಿಯಾದ ಸಿದ್ಧಾಂತ.ಬಿ.ಪೃಥ್ವಿ ಮೆಟ್ರೋಯುನೈಟೆಡ್ ಹಾಸ್ಪಿಟಲ್ ಮೆಡಿಕಲ್ ಡೈರೆಕ್ಟರ್ ಆಗಿರುವ ಶ್ರೀಯುತ. ಡಾ .ಪೃಥ್ವಿಬಿ.ಸಿ ಹಾಗೂ ಅಸೋಸಿಯೇಟ್ ಪ್ರೊಫೆಸರ್ SIMS ನಲ್ಲಿಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಡಾ. ರೂಪಶ್ರೀ.ಎಸ್ ದಂಪತಿಗಳ ಪುತ್ರನಾಗಿದ್ದಾನೆ. ವಿದ್ಯಾರ್ಥಿಡಿ .ಆರ್. ಪ್ರಣಿತ್ ರೆಡ್ಡಿಶ್ರೀಮತಿ ಅನುಷಾ ಕೆ ಬಿ ಹಾಗೂ ಶ್ರೀಯುತ ರಮೇಶ್ ಡಿ.ಎಸ್ ದಂಪತಿಗಳ ಪುತ್ರನಾಗಿದ್ದಾನೆ.

ರಾಷ್ಟ್ರಮಟ್ಟದಲ್ಲಿಶಿವಮೊಗ್ಗ ನಗರವನ್ನುಪ್ರತಿನಿಧಿಸಿ ಶಾಲೆಗೆ, ಜಿಲ್ಲೆಗೆ ಹಾಗೂ ರಾಜ್ಯಕ್ಕೆಕೀರ್ತಿತಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪರಿಶ್ರಮಕ್ಕೆಶಾಲೆಯ ಪ್ರಾಂಶುಪಾಲರಾದ ಡಾ.ಸರೋಜಾ ಬಿ ಶಿಳ್ಳಿನ್, ಆಡಳಿತ ಮಂಡಳಿಯವರಾದ ಶ್ರೀಯುತ ಸುರೇಶ್ ಕುಮಾರ್, ಕೋಆರ್ಡಿನೇಟರ್ರ್ಸ್, ಬೋಧಕ ಮತ್ತುಬೋಧಕೇತರ ವೃಂದದವರು ಹಾರೈಸಿ ಶುಭಕೋರಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...