Tuesday, April 29, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ ಪೊಲೀಸರಿಂದ ಮನೆಮರಿದು ಕಳ್ಳತನ ಮಾಡಿದ ಆರೋಪಿಗಳ ಪತ್ತೆ..! ಹಣ, ಚಿನ್ನ, ಬೆಳ್ಳಿ ವಶ ಆರೋಪಿಗಳು...

ತೀರ್ಥಹಳ್ಳಿ ಪೊಲೀಸರಿಂದ ಮನೆಮರಿದು ಕಳ್ಳತನ ಮಾಡಿದ ಆರೋಪಿಗಳ ಪತ್ತೆ..! ಹಣ, ಚಿನ್ನ, ಬೆಳ್ಳಿ ವಶ ಆರೋಪಿಗಳು ಜೈಲಿಗೆ..!

ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ. ಈ ಸಂಬಂಧ ತೀರ್ಥಳ್ಳಿ ತಾಲೂಕಿನ ಮಾಲೂರು ಠಾಣೆಯಲ್ಲಿ ಗುನ್ನೆ ಸಂಖ್ಯೆ 0009/2025 ಕಲಂ 305, 331(3) ಬಿ ಎನ್ ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ಪತ್ತೆಗಾಗಿ ತಂಡ ರಚಿಸಿದ ಎಸ್ಪಿ ಮಿಥುನ್ ಕುಮಾರ್ ..!

ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್, ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1 ಶಿವಮೊಗ್ಗ ಜಿಲ್ಲೆ, ಕಾರಿಯಪ್ಪ ಎ.ಜಿ.ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ, ರವರ ಮಾರ್ಗದರ್ಶನದಲ್ಲಿ, ಅರವಿಂದ್ ಎನ್ ಕಲಗುಚ್ಚಿ ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀಧರ್ ಪೊಲೀಸ್ ವೃತ್ತ ನಿರೀಕ್ಷಕರು ಮಾಳೂರು ವೃತ್ತ ರವರ ನೇತೃತ್ವದಲ್ಲಿ, ಕುಮಾರ್ ಕುರಗುಂದ ಪಿಎಸ್ಐ, ಮಾಳೂರು ಪೊಲೀಸ್ ಠಾಣೆ ಶಿವಾನಂದ ಧರೇನವರ್, ಪಿಎಸ್ಐ ಮಾಳೂರು ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ಹೆಚ್. ಸಿ ಸುರಕ್ಷಿತ್, ಮೋಹನ್, ಮೇಘರಾಜ್, ಮಂಜುನಾಥ, ಲೊಕೇಶ್, ಸಿಪಿಸಿ ಸಂತೋಷ್ ಕುಮಾರ್, ರಮೇಶನಾಯ್ಕ, ವಿವೇಕ, ಪುನೀತ್ ಕುಮಾರ್, ವಿನಯ್ ಕುಮಾರ್, ಅರವಿಂದ, ಚೇತನ್ ಕುಮಾರ್ ಅಭಿಲಾಷ್, ಮಂಜಾನಾಯ್ಕ, ಪ್ರವೀಣ್ ಕುಮಾರ್ ಮತ್ತು ಪ್ರಸನ್ನ ರವರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ದಿನಾಂಕಃ 13-03-2025 ರಂದು ಪ್ರಕರಣದ ಆರೋಪಿತರಾದ 1) ಅಬ್ದುಲ್ ಶಫೀಕ್ ಅಬ್ದುಲ್ ರಶೀದ್, 21 ವರ್ಷ, ಶ್ರೀರಾಮನಗರ, ಗೋಪಾಳ, ಶಿವಮೊಗ್ಗ. 2) ಖಲೀಲ್ ಖಾನ್ 24 ವರ್ಷ, ಸೂಳೆಬೈಲ್ ಶಿವಮೊಗ್ಗ ಟೌನ್ ಮತ್ತು 3) ಸೈಯದ್ ಜಾವೀದ್ @ ಶೋಯೆಬ್, 23 ವರ್ಷ, ಜೆ.ಪಿ. ನಗರ, ಶಿವಮೊಗ್ಗ ಟೌನ್ ಇವರುಗಳನ್ನು ದಸ್ತಗಿರಿ ಮಾಡಿ ಸದರಿ ಆರೋಪಿತರಿಂದ ಮೇಲ್ಕಂಡ ಪ್ರರಕಣವೂ ಸೇರಿದಂತೆ, ಮಾಳೂರು ಪೊಲೀಸ್ ಠಾಣೆಯಲ್ಲಿ 2025ನೇ ಸಾಲಿನಲ್ಲಿ ವರದಿಯಾದ 2 ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 80,000/- ರೂಗಳ ಸುಜುಕಿ ಆಕ್ಸೆಸ್ ಸ್ಕೂಟರ್, ಅಂದಾಜು ಮೌಲ್ಯ 5,50,000/- ರೂಗಳ 72 ಗ್ರಾಂ ತೂಕದ ಬಂಗಾರದ ಆಭರಣಗಳು, ಅಂದಾಜು ಮೌಲ್ಯ 22,000/- ರೂಗಳ 265 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿ ಒಟ್ಟು 6,52,000/- ರೂಪಾಯಿಯ ಬೆಳ್ಳಿ, ಬಂಗಾರದ ಆಭರಣಗಳು ಮತ್ತು ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರನ್ನು ಘನ ನ್ಯಾಯಾಲಯಕ್ಕೆ ಹಾಜರ್ ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್‌‌ ಜಿ ಕೆ ಅಭಿನಂದಿಸಿದ್ದಾರೆ.

ರಘುರಾಜ್ ಹೆಚ್. ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...