Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗ:ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ...!!

ಶಿವಮೊಗ್ಗ:ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ…!!

ನಿವಾಸಿಗಳು ತಮ್ಮ ಮನೆ ಸುತ್ತಮುತ್ತ ಉತ್ತಮ ಗಿಡಗಳನ್ನು ಹಾಕಿ ಬೆಳೆಸಬೇಕು. ಹಾಗೂ ಬಡಾವಣೆಗಳಲ್ಲಿ ನಿರ್ಮಿಸಿರುವ ಉದ್ಯಾನವನಗಳನ್ನು ಸಂರಕ್ಷಿಸಿಕೊಂಡು ಹೋಗಬೇಕು ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಿಳಿಸಿದರು.

ಇಂದು ಕುವೆಂಪುನಗರದ ಎನ್‌ಇಎಸ್ ಬಡಾವಣೆಯ ಉದ್ಯಾನವನ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಎನ್‌ಇಎಸ್ ಬಡಾವಣೆಯ ಉದ್ಯಾನವನಕ್ಕೆ ಯಾವೆಲ್ಲ ರೀತಿಯ ಗಿಡ-ಮರಗಳನ್ನು ಹಾಕಬೇಕು, ಎಲ್ಲಿ ಜಿಮ್ ಅಳವಡಿಸಬೇಕು, ಮಕ್ಕಳ ಆಟಿಕೆಗಳ ಅಳವಡಿಕೆ ಹೀಗೆ ಉದ್ಯಾನವನದ ಕುರಿತು ಸಮರ್ಪಕವಾದ ಯೋಜನೆ ತಯಾರಿಸಿ, ವ್ಯವಸ್ಥಿತವಾಗಿ ಉದ್ಯಾನವನ ನಿರ್ಮಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದ ಅವರು ಉದ್ಯಾನವನಗಳನ್ನು ಉಳಿಸಿಕೊಂಡು ಹೋಗುವಲ್ಲಿ ನಿವಾಸಿಗಳ ಸಹಕಾರ ಅತ್ಯಗತ್ಯವಾಗಿದೆ. ಎಲ್ಲ ನಿವಾಸಿಗಳು ಗಿಡ ಮರಗಳನ್ನು ನೆಡಬೇಕು ಹಾಗೂ ಉದ್ಯಾನವನದ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾತನಾಡಿ, ನಗರವನ್ನು ಹಸಿರೀಕರಣ ಮಾಡಲು ಸೂಡಾ ವತಿಯಿಂದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 05 ಕೆರೆಗಳನ್ನು ಅಭಿವೃದ್ದಿ ಪಡಿಸಲು ಸಹ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು. ಪ್ರಸ್ತುತ ಕುವೆಂಪು ನಗರದ ಹತ್ತಿರದ ಎನ್‌ಇಎಸ್ ಬಡಾವಣೆಯಲ್ಲಿ ಉದ್ಯಾನವನ ಅಭಿವೃದ್ದಿ ಕಾಮಗಾರಿಯನ್ನು ರೂ.25 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಫೆನ್ಸಿಂಗ್, ಹೊರಾಂಗಣ ವ್ಯಾಮಾಯ ಸಾಮಗ್ರಿ, ಪಾಥ್‌ವೇ ನಿರ್ಮಾಣ, ಕಲ್ಲಿನ ಬೆಂಚುಗಳನ್ನು ಅಳವಡಿಸಲಾಗುವುದು. ಉತ್ತಮ ಮರಗಳಾಗುವಂತಹ ಗಿಡಗಳನ್ನು ನೆಡಲಾಗುವುದು ಎಂದ ಅವರು ಬಡಾವಣೆಗಳಲ್ಲಿನ ಎಲ್ಲ ನಿವಾಸಿಗಳು ತಮ್ಮ ಮನೆ ಮುಂದೆ ಗಿಡಗಳನ್ನು ಹಾಕಿ ಬೆಳೆಸಬೇಕು ಎಂದರು. ಹಾಗೆಯೇ ಕೃಷಿನಗರದ ಡಾರ‍್ಸ್ ಕಾಲೋನಿಯಲ್ಲಿರುವ ಉದ್ಯಾನವನ ಅಭಿವೃದ್ದಿ ಕಾಮಗಾರಿಯನ್ನು ರೂ.20 ಲಕ್ಷ ಹಾಗೂ ಬಸವನಗುಡಿ 100 ಅಡಿ ರಸ್ತೆಯಲ್ಲಿರುವ ರೋಟರಿ ರಕ್ತನಿಧಿ ಹತ್ತಿರದ ಉದ್ಯಾನವನ ಅಭಿವೃದ್ದಿ ಕಾಮಗಾರಿಯನ್ನು ಅಂದಾಜು ಮೊತ್ತ ರೂ.20 ಲಕ್ಷದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ಸಂಪರ್ಕ ರಸ್ತೆ ಸೇರಿದಂತೆ ಬಡಾವಣೆಗಳಲ್ಲಿನ ಸಮಸ್ಯೆಗಳ ಕುರಿತು ಪ್ರಾಧಿಕಾರದ ಗಮನಕ್ಕೆ ತಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪಾಲಿಕೆ ಮಾಜಿ ಸದಸ್ಯರಾದ ಧೀರರಾಜ್ ಹೊನ್ನವಿಲೆ ಮಾತನಾಡಿ, ಎನ್‌ಇಎಎಸ್ ಬಡಾವಣೆಯ ಭಾಗದಲ್ಲಿ ರೆವೆನ್ಯು ನಿವೇಶನಗಳು ಮಧ್ಯೆ ಮಧ್ಯೆ ಇದ್ದು ಇದರಿಂದ ಮುಖ್ಯ ರಸ್ತೆಗೆ ಸಂಪರ್ಕ ರಸ್ತೆ ಸಾಧ್ಯವಾಗುತ್ತಿಲ್ಲ. ಕನ್ವರ್ಷನ್‌ಗೆ ಬಂದ ವೇಳೆ ಸಂಪರ್ಕ ರಸ್ತೆಗೆ ಅನುವು ಮಾಡಿಕೊಡಬೇಕು. ಹಾಗೂ ಈ ಭಾಗದಲ್ಲಿರುವ 6 ಕೆರಗಳನ್ನು ಅಭಿವೃದ್ದಿಪಡಿಸಿಕೊಡಬೇಕೆಂದು ಮನವಿ ಮಾಡಿದರು.

ಎನ್‌ಇಎಸ್ ಬಡಾವನೆ ನಿವಾಸಿಗಳ ಸಂಘದ ಅಧ್ಯಕ್ಷರಾದ ಪ್ರಸನ್ನ ಮಾತನಾಡಿ, ಬಡಾವಣೆ ಅಭಿವೃದ್ದಿ ಹೊಂದುತ್ತಿದೆ. ಆದರೆ ಇಲ್ಲಿ ಸಂಪರ್ಕ ರಸ್ತೆಗೆ ಸ್ವಲ್ಪ ತೊಂದರೆ ಇದ್ದು, ಸಂಪರ್ಕ ರಸ್ತೆ ನಿರ್ಮಿಸಿಕೊಡಬೇಕು ಹಾಗೂ ಸಿಟಿ ಬಸ್ ವ್ಯವಸ್ಥೆ ಮಾಡಿಕೊಡಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಜ್ಞಾನೇಶ್ವರ್, ಮಾಜಿ ಸೂಡಾ ಅಧ್ಯಕ್ಷ ನಾಗರಾಜ್, ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಸೂಡಾ ಅಭಿಯಂತರರಾದ ಬಸವರಾಜಪ್ಪ, ಗಂಗಾಧರ ಸ್ವಾಮಿ, ಅಧಿಕಾರಿಗಳು, ನಿವಾಸಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...