
ಸೋಮವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.
ಈ ಕಾರ್ಯಕ್ರಮದಲ್ಲಿ, ಸಚಿವರಾದ ಡಿ. ಸುಧಾಕರ್ ರವರು, ಜಿಲ್ಲೆಯ – ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಆಗಮಿಸಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ನಾಡು ಕಂಡ ಅಪ್ರತಿಮ ನಾಯಕ ರಾಜೀವ್ ಗಾಂಧಿಯವರ ಕನಸಿನ ಯೋಜನೆಯನ್ನು ಮನಮೋಹನ್ ಸಿಂಗ್ ರವರು ಪ್ರಧಾನಮಂತ್ರಿಯಾಗಿದ್ದಾಗ ಪರಿಣಾಮಕಾರಿಯಾಗಿ ಜಾರಿಗೆ ತಂದು ದುಡಿಯುವ ಕೈಗಳಿಗೆ ಉದ್ಯೋಗದ ಜೊತೆಗೆ ರಾಷ್ಟ್ರೀಯ ಸಾಕ್ಷರತಾ ಆಂದೋಲನಕ್ಕೆ ನಾಂದಿ ಹಾಡಿದರು. ಇಂತಹ ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮ್ಮೆಲ್ಲರ ಭಾಗ್ಯವೆಂದು ಭಾವಿಸಿ ನಾವೆಲ್ಲರೂ ಈ ಸಮಾರಂಬದಲ್ಲಿ ಕೈಜೋಡಿಸಿ ಕಾರ್ಯಕ್ರಮದ ಯಶಸ್ವಿನಲ್ಲಿ ಭಾಗಿಯಾಗೋಣ ಎಂದು ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ.
ಹಾಗೆ ಬರುವಾಗ ಗುದ್ದಲಿ ಹಾಗೂ ಬುಟ್ಟಿ ತರುವುದನ್ನು ಮರೆಯಬೇಡಿ ಎಂದಿದ್ದಾರೆ.