Home ಕಾಂಗ್ರೆಸ್ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ…!

ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ…!

by EDITOR NEWS WARRIORS

ಶೃಂಗೇರಿ ; ಕ್ಷೇತ್ರದ ಮಾಜಿ ಶಾಸಕರು ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಇಂದು ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ರಾಮಯ್ಯ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸುಮಾರು 1,45 ರ ಸುಮಾರಿಗೆ ನಿಧನರಾಗಿದ್ದಾರೆ.

1978 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ‌ ಶಾಸಕರಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸಿದ ಬೇಗನೆ ರಾಮಯ್ಯ ದಿವಂಗತ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಶೃಂಗೇರಿ ಕ್ಷೇತ್ರದ ನರಸಿಂಹರಾಜಪುರದಿಂದ‌ ವಿದ್ಯಾರ್ಥಿ ದೆಸೆಯಿಂದಲೇ 1972ರಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಬೇಗಾನೆ ರಾಮಯ್ಯ ಶಾಸಕರಾಗಿ ಸಚಿವರಾಗಿ ಗುರುತಿಸಿಕೊಂಡಿದ್ದರು ಇವರ ನಿಧನಕ್ಕೆ ‌ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರು ಕಾಡ ಅಧ್ಯಕ್ಷರಾದ ಅಂಶುಮಂತ್, ಶೃಂಗೇರಿ ಶಾಸಕರಾದ ರಾಜೇಗೌಡ, ಕುಟುಂಬವಲಯ, ಸ್ನೇಹಿತರ ಒಳಗೊಂಡಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಾಳೆ ಅಂತ್ಯ ಸಂಸ್ಕಾರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗಾಜನೂರಿನ ‌ ಸೀತಾ ಫಾರಂ ಹೊಸಹಳ್ಳಿಯಲ್ಲಿ ನೆರವೇರಿಸಲು ಕುಟುಂಬದವರು ನಿಶ್ಚಯಿಸಿದ್ದು ಬೆಂಗಳೂರಿನಲ್ಲಿ ಅಂತಿಮ ದರ್ಶನದ ಅವಕಾಶವನ್ನು ಈ ದಿನ ಸಂಜೆ 5:30ವರೆಗೆ ಆಫ್ಟರ್ ಸಿಎಂ ಹಾಸ್ಪಿಟಲ್ ಕೊಡಿಗೆಹಳ್ಳಿ ಗೇಟ್ ಬಳ್ಳಾರಿ ರಸ್ತೆ ಬೆಂಗಳೂರು ಇಲ್ಲಿ ಕಲ್ಪಿಸಲಾಗಿದೆ .

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!