Friday, June 13, 2025
Google search engine
Homeಕಾಂಗ್ರೆಸ್ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...!

ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ…!

ಶೃಂಗೇರಿ ; ಕ್ಷೇತ್ರದ ಮಾಜಿ ಶಾಸಕರು ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಇಂದು ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ರಾಮಯ್ಯ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸುಮಾರು 1,45 ರ ಸುಮಾರಿಗೆ ನಿಧನರಾಗಿದ್ದಾರೆ.

1978 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ‌ ಶಾಸಕರಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸಿದ ಬೇಗನೆ ರಾಮಯ್ಯ ದಿವಂಗತ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಶೃಂಗೇರಿ ಕ್ಷೇತ್ರದ ನರಸಿಂಹರಾಜಪುರದಿಂದ‌ ವಿದ್ಯಾರ್ಥಿ ದೆಸೆಯಿಂದಲೇ 1972ರಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಬೇಗಾನೆ ರಾಮಯ್ಯ ಶಾಸಕರಾಗಿ ಸಚಿವರಾಗಿ ಗುರುತಿಸಿಕೊಂಡಿದ್ದರು ಇವರ ನಿಧನಕ್ಕೆ ‌ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರು ಕಾಡ ಅಧ್ಯಕ್ಷರಾದ ಅಂಶುಮಂತ್, ಶೃಂಗೇರಿ ಶಾಸಕರಾದ ರಾಜೇಗೌಡ, ಕುಟುಂಬವಲಯ, ಸ್ನೇಹಿತರ ಒಳಗೊಂಡಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಾಳೆ ಅಂತ್ಯ ಸಂಸ್ಕಾರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗಾಜನೂರಿನ ‌ ಸೀತಾ ಫಾರಂ ಹೊಸಹಳ್ಳಿಯಲ್ಲಿ ನೆರವೇರಿಸಲು ಕುಟುಂಬದವರು ನಿಶ್ಚಯಿಸಿದ್ದು ಬೆಂಗಳೂರಿನಲ್ಲಿ ಅಂತಿಮ ದರ್ಶನದ ಅವಕಾಶವನ್ನು ಈ ದಿನ ಸಂಜೆ 5:30ವರೆಗೆ ಆಫ್ಟರ್ ಸಿಎಂ ಹಾಸ್ಪಿಟಲ್ ಕೊಡಿಗೆಹಳ್ಳಿ ಗೇಟ್ ಬಳ್ಳಾರಿ ರಸ್ತೆ ಬೆಂಗಳೂರು ಇಲ್ಲಿ ಕಲ್ಪಿಸಲಾಗಿದೆ .

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!