Saturday, June 21, 2025
Google search engine
Homeರಾಜ್ಯBig news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?!

Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?!

ಮಾಜಿ ಡಿಸಿಎಂ ಈಶ್ವರಪ್ಪ ನವರಿಗೆ ಬಂಧನದ ಭೀತಿ ಎದುರಾಯಿತಾ..?! ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಜಿ ಡಿಸಿಎಂ ಈಶ್ವರಪ್ಪ ಆದರೆ ಎದುರುದಾರರಾದ ಲೋಕಾಯುಕ್ತ ಪೊಲೀಸ್ ಹಾಗೂ ದೂರದಾರರಾದ ವಕೀಲ ವಿನೋದ್ ರವರಿಗೆ ತಕರಾರು ಅರ್ಜಿ ಸಲ್ಲಿಸಲು ನೋಟಿಸ್ ನೀಡಿದ ನ್ಯಾಯಾಲಯ ಕುತೂಹಲ ಘಟ್ಟ ತಲುಪಿದ ಪ್ರಕರಣ…

ಏನಿದು ಪ್ರಕರಣ…!

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು.ಶಿವಮೊಗ್ಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು ಆದರೆ ಇದಕ್ಕೆ ಈಶ್ವರಪ್ಪ ತಡೆಯಾಜ್ಞೆ ಪಡೆದಿದ್ದರು ಈ ಪ್ರಕರಣ 3 ಬಾರಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿತ್ತು ಅಂತಿಮವಾಗಿ 2021 ರಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿಕುನ್ನ ಪ್ರಕರಣದ ವಿಚಾರಣೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ರವರು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 13(1) (d) (e) ಅಡಿಯಲ್ಲಿ 3 ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ Dysp ಯವರಿಗೆ ಆದೇಶಿಸಿದ್ದರು.

ಪ್ರಕರಣ ತನಿಖೆ ಹಂತದಲ್ಲಿ ಇರುವಾಗಲೇ ಈಶ್ವರಪ್ಪನವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದ್ದು ಪ್ರಕರಣಕ್ಕೆ ಇಡಿ ಎಂಟ್ರಿ ಆಗುವ ಸಾಧ್ಯತೆ ಇರುವುದರಿಂದ ಮಾಜಿ ಡಿಸಿಎಂ ಗೆ ಬಂಧನದ ಭೀತಿ ಕಾಡ್ತಾ ಇದಿಯಾ..?! ಎನ್ನುವ ಪ್ರಶ್ನೆ ಎದುರಾಗಿದೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!