Home ರಾಜ್ಯBig news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?!

Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?!

by EDITOR NEWS WARRIORS
0 comments

ಮಾಜಿ ಡಿಸಿಎಂ ಈಶ್ವರಪ್ಪ ನವರಿಗೆ ಬಂಧನದ ಭೀತಿ ಎದುರಾಯಿತಾ..?! ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಜಿ ಡಿಸಿಎಂ ಈಶ್ವರಪ್ಪ ಆದರೆ ಎದುರುದಾರರಾದ ಲೋಕಾಯುಕ್ತ ಪೊಲೀಸ್ ಹಾಗೂ ದೂರದಾರರಾದ ವಕೀಲ ವಿನೋದ್ ರವರಿಗೆ ತಕರಾರು ಅರ್ಜಿ ಸಲ್ಲಿಸಲು ನೋಟಿಸ್ ನೀಡಿದ ನ್ಯಾಯಾಲಯ ಕುತೂಹಲ ಘಟ್ಟ ತಲುಪಿದ ಪ್ರಕರಣ…

ಏನಿದು ಪ್ರಕರಣ…!

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು.ಶಿವಮೊಗ್ಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು ಆದರೆ ಇದಕ್ಕೆ ಈಶ್ವರಪ್ಪ ತಡೆಯಾಜ್ಞೆ ಪಡೆದಿದ್ದರು ಈ ಪ್ರಕರಣ 3 ಬಾರಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿತ್ತು ಅಂತಿಮವಾಗಿ 2021 ರಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿಕುನ್ನ ಪ್ರಕರಣದ ವಿಚಾರಣೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ರವರು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 13(1) (d) (e) ಅಡಿಯಲ್ಲಿ 3 ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ Dysp ಯವರಿಗೆ ಆದೇಶಿಸಿದ್ದರು.

ಪ್ರಕರಣ ತನಿಖೆ ಹಂತದಲ್ಲಿ ಇರುವಾಗಲೇ ಈಶ್ವರಪ್ಪನವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದ್ದು ಪ್ರಕರಣಕ್ಕೆ ಇಡಿ ಎಂಟ್ರಿ ಆಗುವ ಸಾಧ್ಯತೆ ಇರುವುದರಿಂದ ಮಾಜಿ ಡಿಸಿಎಂ ಗೆ ಬಂಧನದ ಭೀತಿ ಕಾಡ್ತಾ ಇದಿಯಾ..?! ಎನ್ನುವ ಪ್ರಶ್ನೆ ಎದುರಾಗಿದೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...