Wednesday, May 14, 2025
Google search engine
Homeಬೆಳಗಾವಿಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..!

ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..!

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಿದ್ದು,

21 ರಿಂದ 30 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯು.ಜಿ.ಸಿ.ಯಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಪಡೆದಿರಬೇಕು. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 8.00 ಲಕ್ಷಕ್ಕಿಂತ ಮೀರಿರಬಾರದು. ಪುರುಷರು ಕನಿಷ್ಠ ಎತ್ತರ 168 ಸೆಂ.ಮೀ, ತೂಕ 50 ಕೆ.ಜಿ ಹಾಗೂ ಎದೆಯ ಸುತ್ತಳತೆ 76 ಸೆಂ.ಮಿ. ಇರಬೇಕು ಮತ್ತು ಮಹಿಳೆಯರು ಕನಿಷ್ಠ 157 ಸೆಂ.ಮೀ. ಎತ್ತರ, 45 ಕೆ. ಜಿ. ತೂಕವಿರಬೇಕು. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆಸಕ್ತರು ವೆಬ್‌ಸೈಟ್ https://sevasinduservices.karnataka.gov.in/sevasindhu/departmentservices, https://dom.karnatka.gov.in ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು. ————–

RELATED ARTICLES
- Advertisment -
Google search engine

Most Popular

Latest news
ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..! ತೀರ್ಥಹಳ್ಳಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಕುಮಾರಿ ದೀಕ್ಷಾಗೆ ಮಾಮ್ಕೋಸ್ ವತಿಯಿಂದ ಪ್ರೋ... ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..!