Sunday, June 15, 2025
Google search engine
Homeಶಿವಮೊಗ್ಗಆರೋಗ್ಯಅಕ್ಟೋಬರ್ 1ರಿಂದ ಸಿನಿಮಾಕ್ಕೆ 100ರಷ್ಟು, ಅಕ್ಟೋಬರ್ 3 ರಿಂದ ಪಬ್ ಗೆ ಅವಕಾಶ ದಸರಾಗೆ ಹೊಸ...

ಅಕ್ಟೋಬರ್ 1ರಿಂದ ಸಿನಿಮಾಕ್ಕೆ 100ರಷ್ಟು, ಅಕ್ಟೋಬರ್ 3 ರಿಂದ ಪಬ್ ಗೆ ಅವಕಾಶ ದಸರಾಗೆ ಹೊಸ ಮಾರ್ಗಸೂಚಿ ಸಿಎಂ ಘೋಷಣೆ..

ಬೆಂಗಳೂರು :ಸೆಪ್ಟೆಂಬರ್ :24>ಅಕ್ಟೋಬರ್ 3 ರಿಂದ ಪಬ್ ಗಳನ್ನು ತೆರೆಯೋದಕ್ಕೆ ಅವಕಾಶ ನೀಡಲಾಗುತ್ತಿದೆ. 6 ರಿಂದ 12ನೇ ತರಗತಿಗಳನ್ನು ಶೇ.100 ಆರಂಭಿಸದೋಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು.

ಇಂದು ನಡೆದಂತ ಕೋವಿಡ್ ನಿಯಂತ್ರಣ ಸಭೆಯ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗುವುದು. ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಭರ್ತಿಗೆ ಹಾಗೂ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು. ಪಬ್ ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು ಎಂದರು.

ಚಿತ್ರಮಂದಿರಗಳ ಪ್ರವೇಶಕ್ಕೆ ಒಂದು ದೋಸ್ ಕಡ್ಡಾಯ, ಗರ್ಭಿಣಿಯರಿಗೆ ಮಕ್ಕಳಿಗೆ ಇಲ್ಲ ಅವಕಾಶ:

ಇನ್ನು ಚಿತ್ರಮಂದಿರಗಳ ಪ್ರವೇಶಕ್ಕೆ ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದರು.

ರಾತ್ರಿ ಕರ್ಫ್ಯೂ ನಿಗದಿ:

ರಾತ್ರಿ ಕರ್ಪ್ಯೂವನ್ನು ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನಿಗದಿ ಪಡಿಸಲಾಗುವುದು. ಆರರಿಂದ 12ನೇ ತರಗತಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಯಿತು ಎಂದರು.

ದಸರಾಕ್ಕೆ ಹೊಸ ಮಾರ್ಗಸೂಚಿ ಗಡಿಭಾಗದಲ್ಲಿ ಹೆಚ್ಚಿನ ಜಾಗ್ರತೆ:

ದಸರಾ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ಗಡಿ ಭಾಗದಲ್ಲಿ ಹೆಚ್ಚು ನಿಗಾವಹಿಸಲಾಗುವುದು. ಯಾದಗಿರಿ, ರಾಯಚೂರು, ಕಲಬುರ್ಗಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಇದೇ ಸಮಯದಲ್ಲಿ ತಿಳಿಸಿದರು.

ವರದಿ.. ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!