Wednesday, April 30, 2025
Google search engine
Homeಶಿವಮೊಗ್ಗಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ವೈಗೆ ‌ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ...

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ವೈಗೆ ‌ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್. ಕೆ. ರಾಘವೇಂದ್ರ ಅವರಿಂದ ಅಭಿನಂದನೆಗಳು…

ಮಾಜಿ ಮುಖ್ಯಮಂತ್ರಿ ಅಭಿವೃದ್ಧಿಯ ಹರಿಕಾರ ರಾಜಾಹುಲಿ ಬಿಎಸ್ ಯಡಿಯೂರಪ್ಪ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಾ ಅವರಿಗೆ ನೆರವಾಗುತ್ತಾ ಸದಾ ಜನರ ನಡುವೆಯೇ ಇರುವ ಜನನಾಯಕ ಹಾಗೂ ಸದನದಲ್ಲಿ ಅಧಿಕಾರದಲ್ಲಿ ಇಲ್ಲದಿದ್ದಾಗ ಕೂಡ ಸಾಮಾನ್ಯ ಶಾಸಕರಾಗಿ ಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿ ಆಡಳಿತ ಪಕ್ಷದ ಗಮನಸೆಳೆದು ಸಮಸ್ಯೆ ಬಗೆಹರಿಸುವಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಶಾಸಕರಾಗಿದ್ದರು.

ಇಂತಹ ಸಾಧನೆಗೈದ ಶಾಸಕರಾದ ಬಿಎಸ್ ಯಡಿಯೂರಪ್ಪನವರು ಯುವ ಶಾಸಕರಿಗೆ ಮಾದರಿ ಎಂದರೆ ತಪ್ಪಾಗಲಾರದು.

ಅಧಿಕಾರಿಗಳಿಂದ ಅವರು ಕೆಲಸ ತೆಗೆದುಕೊಳ್ಳುವ ರೀತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ರೀತಿ ಬೇರೆಯವರಿಗೆ ಮಾರ್ಗದರ್ಶನ ಎನ್ನಬಹುದು.

ಇಂತಹ ಜನನಾಯಕನಿಗೆ ಅತ್ಯುತ್ತಮ ಶಾಸಕ ಎನ್ನುವ ಪ್ರಶಸ್ತಿ ನೀಡುವುದರ ಮೂಲಕ ಉಳಿದ ಶಾಸಕರಿಗೂ ಆ ದಿಕ್ಕಿನಲ್ಲಿ ಹೋಗಲು ಪ್ರೇರಣೆ ನೀಡಲು ಹೊಸ ನಾಂದಿ ಹಾಡಲಾಗಿದೆ.

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ ಯಡಿಯೂರಪ್ಪ ನವರಿಗೆ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್, ಕೆ ರಾಘವೇಂದ್ರ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...