Wednesday, April 30, 2025
Google search engine
Homeಶಿವಮೊಗ್ಗತೀರ್ಥಹಳ್ಳಿ ರಾಜಕೀಯದ ಬಗ್ಗೆ ಕಿಮ್ಮನೆ ಹೊಸ ಬಾಂಬ್ ಕಿಮ್ಮನೆ ಮಾತು ನಿಜವಾಗುತ್ತಾ?

ತೀರ್ಥಹಳ್ಳಿ ರಾಜಕೀಯದ ಬಗ್ಗೆ ಕಿಮ್ಮನೆ ಹೊಸ ಬಾಂಬ್ ಕಿಮ್ಮನೆ ಮಾತು ನಿಜವಾಗುತ್ತಾ?

ಶಿವಮೊಗ್ಗ: ಜೆಡಿಎಸ್ ನಲ್ಲಿದ್ದ ಆರ್ ಎಮ್ ಮಂಜುನಾಥ್ ಗೌಡರು ಕಾಂಗ್ರೆಸ್ ಸೇರಿದ ನಂತರ ದಿನದಿಂದ ದಿನಕ್ಕೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥರ ಗೌಡರ ನಡುವೆ ವಾಕ್ಸಮರ ಗಳು ನಡೆಯುತ್ತಿದ್ದು.

ನಿನ್ನೆ ನಡೆದ ಕಾರ್ಯಕ್ರಮ ಒಂದರಲ್ಲಿ ಕಿಮ್ಮನೆ ರತ್ನಾಕರ್ ಹೊಸ ಬಾಂಬೊಂದನ್ನು ಸಿಡಿಸಿದ್ದಾರೆ:

ರಾಜಕೀಯದಲ್ಲಿ ಕೆಜೆಪಿ (ಕರ್ನಾಟಕ ಜನತಾ ಪಾರ್ಟಿ) ಮತ್ತೆ ಉದಯಿಸಲಿದೆ. ಜೆಡಿಎಸ್‌ ಆ ಪಕ್ಷದ ಜತೆ ಕೈಜೋಡಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೊಸ ಬಾಂಬ್‌ ಸಿಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಗುರುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡುತ್ತಾ.
ಸದ್ಯದಲ್ಲೇ ಕೆಜೆಪಿ ಪಕ್ಷ ಪುನರ್ ಸ್ಥಾಪನೆ ಆಗಲಿದ್ದು. ಜೆಡಿಎಸ್ ಸಹಯೋಗದಲ್ಲಿ ಸರ್ಕಾರ ರಚಿಸಲು ಎಲ್ಲಾ ಸಿದ್ಧತೆ ನಡೆದಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಈಚೆಗೆ ಕಾಂಗ್ರೆಸ್‌ ಸೇರಿದ ರಾಜಕೀಯ ಅಲೆಮಾರಿಗಳು (ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಬಣ) ಕೆಜೆಪಿ ಸೇರಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿರುವ ಕಿಮ್ಮನೆ ಮುಂದುವರಿದು ಮಾತನಾಡುತ್ತಾ,

ಜೆಡಿಎಸ್ ಕಾಂಗ್ರೆಸ್ ಮುಖಂಡರುಗಳು ಒಂದೇ ಸಭೆಯಲ್ಲಿ ಕಿಮ್ಮನೆ ಆರೋಪ:

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾಂಗ್ರೆಸ್ ಮುಖಂಡರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜೆಡಿಎಸ್ ಮುಖಂಡರು ಕಾಣಿಸಿಕೊಳ್ಳುತ್ತಿದ್ದಾರೆ. ಈಚೆಗೆ ನಡೆದ ಶರಾವತಿ ಮುಳುಗಡೆ ಸಂತ್ರಸ್ತರ ಪಾದಯಾತ್ರೆಯಲ್ಲಿ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ಭಾಗಿಯಾಗಿದ್ದರು. ಬಿದರಗೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವೇಗೌಡರು, ಕುಮಾರಸ್ವಾಮಿ ಭಾವಚಿತ್ರ ಬಳಸಲಾಗಿತ್ತು. ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಬೇರೆ ಪಕ್ಷದವರಿಗೆ ಮಣೆ ಹಾಕುವುದರ ಹಿಂದಿನ ಮರ್ಮವೇನು? ನಾನೂ ಸಭೆ ಆಯೋಜಿಸಿ, ಬೇರೆ ಪಕ್ಷದ ಮುಖಂಡರನ್ನು ಆಹ್ವಾನಸಿದರೆ ಸಹಿಸುವಿರಾ ಎಂದು ಪ್ರಶ್ನಿಸಿದರು.

ಕಿಮ್ಮನೆ ಮಾತಿಗೆ ಹಲವರು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ ಪರಸ್ಪರ ಮಾತಿನ ಚಕಮಕಿ ನಡೆಯಿತು. ‘ಯಾರನ್ನೋ ಕರೆತಂದು ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ’ ಎನ್ನುತ್ತಾ ಕಿಮ್ಮನೆ ಮಧ್ಯದಲ್ಲೇ ಸಭೆಯಿಂದ ಸಿಟ್ಟಿನಿಂದ ಹೊರನಡೆದರು.

ವರದಿ ..ರಘುರಾಜ್ ಹೆಚ್. ಕೆ

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...