Home ತೀರ್ಥಹಳ್ಳಿಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ..!

ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ..!

by EDITOR NEWS WARRIORS
0 comments

 

     

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲೂಕಿನ ವಿವಿಧ ಇಲಾಖೆಗಳು, ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಗಳ ಸಹಕಾರದಲ್ಲಿ ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯ ಶಾಂತವೇರಿ ಗೋಪಾಲ ಗೌಡ ರಂಗ ಮಂದಿರದಲ್ಲಿ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ ರಹಮತ್ತುಲ್ಲ ಅಸಾದಿ, ದೃಷ್ಟಿ ದೋಷ ಪತ್ತೆ ಹಚ್ಚಿ ಕನ್ನಡಕಗಳ ಅಗತ್ಯ ಇರುವವರಿಗೆ ಉಚಿತ ಕನ್ನಡಗಳನ್ನು ನೀಡುವುದರ ಜೊತೆಗೆ ಹೆಚ್ಚಿನ ಚಿಕಿತ್ಸೆಯು ಇರುವವರಿಗೆ ಉನ್ನತ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಈ ಯೋಜನೆ ಅತ್ಯಂತ ಮಾದರಿಯಾದದ್ದು ಎಂದರು. ಮುಂದುವರೆದು ಜನರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಪಟ್ಟಣ ಪಂಚಾಯಿತಿಯೂ ಹಲವು ಯೋಜನೆಗಳು ಹಮ್ಮಿಕೊಂಡಿದ್ದು ಅವರನ್ನು ಕಾರ್ಯಗತಗೊಳಿಸಲಾಯಿತು.

     ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅನಿಕೇತನ್, ಈ ಕಾರ್ಯಕ್ರಮ ದೇಶದಲ್ಲೇ ಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಟಾನಗೊಂಡಿದ್ದು. ಮೂವತ್ತು ವರ್ಷ ಮೇಲ್ಪಟ್ಟ ಎಲ್ಲರನ್ನೂ ತಪಾಸಣೆಗೊಳಪಡಿಸಿ ಅಗತ್ಯ ಅಗತ್ಯಕ್ಕಾಗಿ ನೀಡಲಾಗುವುದು. ಬಹಳ ಮುಖ್ಯವಾಗಿ ದುಬಾರಿ ಚಿಕಿತ್ಸೆಗಳಾದ ಡಯಾಬಿಟೀಸ್ ರೆಟಿನೋಪತಿ, ಗ್ಲುಕೋಮ ಸಮಸ್ಯೆಗಳಿಗೆ ಈ ಕಾರ್ಯಕ್ರಮದಡಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ ಕಣ್ಣಿನ ಸಮಸ್ಯೆಗಳನ್ನು ಪತ್ತೆ ಹಚ್ಚಿ ದ್ವಿತೀಯ ತಪಾಸಣೆಗೆ ಶಿಫಾರಸು ಮಾಡುತ್ತಾರೆ. ಅಲ್ಲಿಯೂ ಹೆಚ್ಚಿನ ಚಿಕಿತ್ಸೆಗೆ ಉನ್ನತ ಆಸ್ಪತ್ರೆಯ ಸರ್ಕಾರಿ, ಖಾಸಗಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳು, ಪಟ್ಟಣ ಪಂಚಾಯತ್, ಲಯನ್ಸ್, ರೋಟರಿ ಸಂಸ್ಥೆಗಳು ಉತ್ತಮ ಸಹಕಾರದೊಂದಿಗೆ ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಲಾಗಿದೆ. ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಭರತ್ ಅತಿಥಿಗಳಾಗಿದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಆರೋಗ್ಯ ಇಲಾಖಾ ಸಿಬ್ಬಂದಿಗಳು, ವೈದ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಟಿ ವಿ ಸ್ವಾಗತಿಸಿ, ನಿರೂಪಿಸಿದರು. ಬಿ ಪಿಎಂ ಗಿರಿ ಡಿ ಟಿ ಟಿ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...