
: ಹಾಸನ ಜಿಲ್ಲೆಯಲ್ಲಿ ನಡೆದ ಘಟನೆ ಇಡೀ ರಾಜ್ಯದ ಗಮನ ಸೆಳೆದು ಸಂಚಲನ ಉಂಟು ಮಾಡಿದ ಸುದ್ದಿಗೆ ಕಾರಣಕರ್ತರಾದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಏನಿದು ಪ್ರಕರಣ:
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ವಿದ್ಯಾ ಗಣಪತಿ ದೇವಸ್ಥಾನಕ್ಕೆ ಲೀಲಮ್ಮ ತೆರಳಿದ್ದು. ಈ ವೇಳೆ ಗಣೇಶ ಮೂರ್ತಿಗೆ ಚಪ್ಪಲಿಹಾರ ಹಾಕಿ ವಿಕೃತಿ ಮೆರೆದಿದ್ದರು. ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈ ಹಾರ ಹಾಕಿದ್ದು ಮುಸುಕುಧಾರಿ ಮಹಿಳೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಡೀ ಹಿಂದೂ ಸಮೂಹ ಇದನ್ನು ತೀವ್ರವಾಗಿ ಖಂಡಿಸಿದೆ ಆದರೆ ಈ ಮಹಿಳೆಯನ್ನು ಪೊಲೀಸರು ಈಗ ವಶಕ್ಕೆ ಪಡೆದಿದ್ದಾರೆ ದುರಂತವೆಂದರೆ ಒಬ್ಬ ಹಿಂದೂ ಮಹಿಳೆಯ ಮುಸುಕು ಹಾಕಿಕೊಂಡು ಈ ಕೃತ್ಯ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಹಾಸನದ ಗುಡ್ಡೇನಹಳ್ಳಿಯ ಲೀಲಮ್ಮ ಕೃತ್ಯದ ರೂವಾರಿ ಈಕೆಯನ್ನು ವಶಕ್ಕೆ ಪಡೆದಿರುವ ಪಿಎಸ್ಐ ಸುರೇಶ್ ಹಾಗೂ ಶೋಭಾ ನೇತೃತ್ವದ ತಂಡದ ವಿಚಾರಣೆ ಒಳಪಡಿಸುತ್ತಿದೆ ಲೀಲಮ್ಮನ ಹಿಂದೆ ಯಾರಿದ್ದಾರೆ..?! ಇದೊಂದು ಪೂರ್ವ ನಿಯೋಜಿತ ಕೃತ್ಯನಾ..?! ಅಥವಾ ಲೀಲಮ್ಮ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ಈ ತರಹದ ಕೃತ್ಯ ಮಾಡಿರಬಹುದೇ ಎಂಬುದು ಪೋಲೀಸರ ತನಿಖೆಯಿಂದ ಹೊರಬರಬೇಕಾಗಿದೆ.


