ಜೈಲಿನಲ್ಲಿ ಕುಖ್ಯಾತ ರೌಡಿಯ ಬರ್ತಡೇ ..! ಜೈಲಿನ ಅಧಿಕಾರಿಗಳೇ ಸಾಥ್..?!

by EDITOR NEWS WARRIORS
0 comments

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಖ್ಯಾತ ರೌಡಿ ಹುಟ್ಟಿದ ಹಬ್ಬದ ಸಂಭ್ರಮಾಚರಣೆ ಜೈಲಿನ ಅಧಿಕಾರಿಗಳ  ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಕುಖ್ಯಾತ ರೌಡಿ ಶೀಟರ್ ಗುಬ್ಬಚ್ಚಿ ಸೀನ ಜೈಲಿನೊಳಗೆಯೇ ಕೇಕ್ ಕತ್ತರಿಸಿ, ಆಪಲ್ ಹಾರ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ,

ಯಾರು ಈ ಗುಬ್ಬಚ್ಚಿ ಸೀನಾ ..?!

ಹಳೇ ದ್ವೇಷದ  ಹಿನ್ನೆಲೆಯಲ್ಲಿ ಕಳೆದ ಜನವರಿ ತಿಂಗಳಲ್ಲಿ  ಮಾಜಿ ರೌಡಿ ವೆಂಕಟೇಶ್ ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿ ಗುಬ್ಬಚ್ಚಿ ಸೀನ ಹಾಗೂ ಆತನ ಸಹಚರರು ಹತ್ಯೆಗೈದಿದ್ದರು.

ಇಡೀ ತಂಡವನ್ನು ಬಂಧಿಸಿದ ಸರ್ಜಾಪುರಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು .

ಇದೀಗ ಜೈಲಿನಲ್ಲಿರುವ ಗುಬ್ಬಚ್ಚಿ ಸೀನ ತನ್ನ  ಸಹಚರರ ಜೊತೆಗೆ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡು ಅದನ್ನು ತನ್ನ ಸ್ನೇಹಿತನ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾನೆ.

ವೆಂಕಟೇಶ್ ಪತ್ನಿಯಿಂದ ದೂರು :

ಜೈಲಿನಲ್ಲಿ ಸೀನ ಹಾಗೂ ಆತನ ಬೆಂಬಲಿಗರಿಗೆ ವಿಶೇಷ ಸೌಲಭ್ಯ ನೀಡಲಾಗಿದೆ ಎಂದು ಆರೋಪಿಸಿ ಎಡಿಜಿಪಿ ದಯಾನಂದ್‌ ಅವರಿಗೆ ಮೃತ ವೆಂಕಟೇಶ್ ಪತ್ನಿ ದೂರು ನೀಡಿದ್ದು ಈ ದೂರು ಆಧರಿಸಿ ಎಡಿಜಿಪಿ ಅವರು, ಡಿಐಜಿ ನೇತೃತ್ವದಲ್ಲಿ ವಿಚಾರಣೆಗೆ ಸೂಚಿಸಿದ್ದಾರೆ.

ರೇಣುಕಸ್ವಾಮಿ ಕೊಲೆ  ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಬಗ್ಗೆ ಸುದ್ದಿಗಳು ವೈರಲ್ ಆಗಿ ಅಧಿಕಾರಿಗಳು ಅಮಾನತ್ತಿಗೆ ಒಳಗಾಗಿದ್ದರು ಅದೇ ರೀತಿ ದರ್ಶನ್ ಬೇಲ್ ರದ್ದತಿಗೂ ಕೂಡ ಈ ಪ್ರಕರಣ ಕಾರಣವಾಗಿತ್ತು.

ಹಳೆಯ ವಿಡಿಯೋ ಈಗ ವೈರಲ್ :

ಜೈಲಿನ ಅಧಿಕಾರಿಗಳ ಮಾಹಿತಿಯಂತೆ ಈ ವಿಡಿಯೋ ಹಳೆಯದ್ದಾಗಿದ್ದು ವೆಂಕಟೇಶ್ ಪತ್ನಿ ದೂರು ನೀಡಿ ಹತ್ತು ದಿನ ಕಳೆದಿದೆ ಇದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎನ್ನುತ್ತಾರೆ.

ಒಟ್ಟಿನಲ್ಲಿ ಜೈಲಿನ ಸಿಬ್ಬಂದಿಗಳ ಸಹಕಾರವಿಲ್ಲದೆ ಇದು ನಡೆಯಲು ಅಸಾಧ್ಯ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಸಿಬ್ಬಂದಿಗಳನ್ನು ಅಮಾನತ್ತಿಗೆ ಒಳಪಡಿಸಬೇಕು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...