Home ರಾಜ್ಯಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್ ಸಲಹೆ..!

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್ ಸಲಹೆ..!

by EDITOR NEWS WARRIORS
0 comments

ಬೆಂಗಳೂರು : ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು.
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕವಾಗಿದೆ” ಎಂದು ಹೇಳಿದರು.
“ನನ್ನ ವೃತ್ತಿ ಜೀವನ ಆರಂಭ ಆಗಿದ್ದು ವಕೀಲರ ಸಹಕಾರಿ ಸಂಘದಲ್ಲಿ. ನನ್ನ ಎಲ್ಲಾ ಸಾಧನೆಯೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ಸಹಕಾರಿ ಬ್ಯಾಂಕ್‌ಗೆ ಸಲ್ಲುತ್ತದೆ” ಎಂದರು. “ವಕೀಲ ವೃತ್ತಿ ಆರಂಭಿಸುವವರಿಗೆ ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಎಂದು ನಾನು ಸಲಹೆ ನೀಡುತ್ತೇನೆ. ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು. ವಕೀಲರು ಸಮಾಜ ಬದಲಾಯಿಸುವ ವೈದ್ಯರಿದ್ದಂತೆ. ಸಮಾಜ ಮತ್ತು ದೇಶವನ್ನೇ ಬದಲಾಯಿಸುವ ಶಕ್ತಿ‌ ಮತ್ತು ಸಾಮರ್ಥ್ಯ ವಕೀಲರಿಗೆ ಇದೆ” ಎಂದು ತಾವು ವಕೀರಾಗಲು ಕಾರಣವಾದ ಹಿನ್ನಲೆಯನ್ನು ಹಂಚಿಕೊಂಡರು.
“ವಕೀಲರಿಗಾಗಿ ವಸತಿ ನಿವೇಶನಗಳನ್ನು ದೊಡ್ಡ ಪ್ರಮಾಣದಲ್ಲಿ (ಬಲ್ಕ್) ಮಂಜೂರು ಮಾಡುವಂತೆ ಮತ್ತು ವಕೀಲರಿಗೆ ಒಂದು ಸಮುದಾಯ ಭವನ ನಿರ್ಮಾಣ ಮಾಡಲು ಅಗತ್ಯ ಇರುವ ಭೂಮಿ ನೀಡುವಂತೆ” ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್. ಅರವಿಂದ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿನ ನ್ಯಾಯ ಮಿತ್ರ ಸಹಕಾರಿ ಬ್ಯಾಂಕ್ ಬೆಳ್ಳಿಮಹೋತ್ಸವ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಳಾದ ಅರವಿಂದ ಕುಮಾರ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯತಿರಾಜ್, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೌಡ, ಕರ್ನಾಟಕ ಬಾರ್ ಅಸೋಸಿಯೇಷನ್ ಅಧ್ಯಕ್ಷ ಮಿಟ್ಟಲ್ ಕೋಡ್ ಸಿದ್ದಲಿಂಗಪ್ಪ ಶೇಖರಪ್ಪ, ನಂಜಪ್ಪ ಕಾಳೇಗೌಡ, ಮಂಜುನಾಥ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...